ಬೆಂಗಳೂರು: ದೇಶಾದ್ಯಂತ ತೈಲಬೆಲೆ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ, ಇಂದು ಕೆಪಿಸಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಸಣ್ಣ ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತು, ಪ್ರತಿಭಟನೆ ನಡೆಸಿ ಗಮನ ಸೆಳೆಯದರು.
ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ ಆರಂಭಗೊಂಡಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕಾಂಗ್ರೆಸ್ ನಾಯಕರು, ಸಿಲಿಂಡರ್ ಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಎಐಸಿಸಿಯಿಂದ ಬೆಲೆ ಏರಿಕೆ ಮುಕ್ತ ಅಭಿಯಾನಕ್ಕೆ ಚಾಲನೆಗೆ, ಕರ್ನಾಟಕದಲ್ಲೂ ಅಭಿಯಾನ ಶುರುವಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಬೈಕ್ ಮೇಲೆ ಮೋದಿ ಕುಳಿತಿರುವ ಪ್ರತಿಕೃತಿಗೆ ಗಂಟೆ ಬಡಿದು ಪೂಜೆ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬೈಕ್ ಮೇಲೆ ಮೋದಿ ಮುಖವಾಡ ಧರಿಸಿ ಕುಳಿತಿರುವ ವ್ಯಕ್ತಿಯ ಬೆನ್ನು ತಟ್ಟಿದ್ದು ಗಮನ ಸೆಳೆಯಿತು. ಅಲ್ಲದೇ ತಲೆ ಮೇಲೆ ಸಣ್ಣ ಸಿಲಿಂಡರ್ ಹೊತ್ತು ಫೋಸ್ ಕೊಟ್ಟಿದ್ದು ಕಂಡು ಬಂತು.
ಈ ವೇಳೆ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಇಳಿದಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ದಿನಾ ಪಿಕ್ ಪಾಕೆಟ್ ಆಗ್ತಿದೆ. ಗ್ಯಾಸ್ ಸಿಲಿಂಡರ್, ಬೈಕ್, ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ ಎಂದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…