Featured

ಅಗ್ನಿಪಥ್ ಯೋಜನೆಗೆ ವಿರೋಧ ಮಾಡಬಾರದು, ಇದೊಂದು ಆದರ್ಶಪ್ರಾಯ ಯೋಜನೆ : ಎಸ್.ಎಂ. ಕೃಷ್ಣ – Vishwanews24

ಅಗ್ನಿಪಥ್ ಯೋಜನೆಗೆ ವಿರೋಧ ಮಾಡಬಾರದು, ಇದೊಂದು ಆದರ್ಶಪ್ರಾಯ ಯೋಜನೆ : ಎಸ್.ಎಂ. ಕೃಷ್ಣ – Vishwanews24

ಮೈಸೂರು: ಅಗ್ನಿಪಥ್ ಯೋಜನೆಗೆ ವಿರೋಧ ಮಾಡಬಾರದು. ಇದೊಂದು ಆದರ್ಶಪ್ರಾಯ ಯೋಜನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.

ಸ್ವಗ್ರಾಮ ಮದ್ದೂರಿನ ಸೋಮನಹಳ್ಳಿಯಲ್ಲಿ ಸಹೋದರ ದಿವಂಗತ ಎಸ್.ಎಂ. ಶಂಕರ್ ಮೆಮೋರಿಯಲ್ ಟ್ರಸ್ಟ್ ಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಾವಧಿಗೆ ಸೇನೆಗೆ ಯುವಕರನ್ನು ನೇಮಿಸಿಕೊಳ್ಳುವುದು ಸ್ವಾಗತಾರ್ಹ ಕ್ರಮ. ಅಮೆರಿಕಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ 20 ವರ್ಷ ಮೇಲ್ಪಟ್ಟ ಯುವಕರು ಕಡ್ಡಾಯವಾಗಿ ಎರಡು ವರ್ಷ ಸೈನಿಕ ಶಿಕ್ಷಣ ಪಡೆಯಬೇಕು. ಭಾರತದಲ್ಲಿ ಈ ಯೋಜನೆ ಜಾರಿಯಾಗಿರುವುದು ಅತ್ಯುತ್ತಮವಾಗಿದೆ ಎಂದರು.

ನಾಲ್ಕು ವರ್ಷದ ಸೇವೆ ಬಳಿಕ ಅಗ್ನಿವೀರರಿಗೆ ಮಿಲಿಟರಿಯ ಬೇರೆ ವಿಭಾಗಗಳು, ಸರ್ಕಾರದ ಇತರ ಹುದ್ದೆಗಳು, ಖಾಸಗಿ ಕಂಪೆನಿಗಳಲ್ಲಿಯೂ ಕೆಲಸ ಮಾಡುವುದಕ್ಕೆ ಅವಕಾಶವಿದೆ. ರಾಜಕೀಯ ದೃಷ್ಟಿಯಿಂದ ಈ ಯೋಜನೆಯನ್ನು ನೋಡದೆ ದೇಶದ ಹಿತದ ದೃಷ್ಟಿಯಿಂದ ನೋಡಬೇಕು. ಅಭಿವೃದ್ದಿಶೀಲ ರಾಷ್ಟ್ರಗಳಲ್ಲಿ ಈ ಯೋಜನೆಯಿಂದಾಗಿ ಹೆಚ್ಚು ಲಾಭವಾಗಿರುವುದರಿಂದ ಭಾರತದ ಹೆಜ್ಜೆಯೂ ದೇಶಕ್ಕೆ ಒಳ್ಳೆಯದಾಗಲಿದೆ ಎಂದವರು ತಿಳಿಸಿದರು.

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

2 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

4 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

4 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

5 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

5 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

5 hours ago