ಮೈಸೂರು: ಅಗ್ನಿಪಥ್ ಯೋಜನೆಗೆ ವಿರೋಧ ಮಾಡಬಾರದು. ಇದೊಂದು ಆದರ್ಶಪ್ರಾಯ ಯೋಜನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಸ್ವಗ್ರಾಮ ಮದ್ದೂರಿನ ಸೋಮನಹಳ್ಳಿಯಲ್ಲಿ ಸಹೋದರ ದಿವಂಗತ ಎಸ್.ಎಂ. ಶಂಕರ್ ಮೆಮೋರಿಯಲ್ ಟ್ರಸ್ಟ್ ಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಾವಧಿಗೆ ಸೇನೆಗೆ ಯುವಕರನ್ನು ನೇಮಿಸಿಕೊಳ್ಳುವುದು ಸ್ವಾಗತಾರ್ಹ ಕ್ರಮ. ಅಮೆರಿಕಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ 20 ವರ್ಷ ಮೇಲ್ಪಟ್ಟ ಯುವಕರು ಕಡ್ಡಾಯವಾಗಿ ಎರಡು ವರ್ಷ ಸೈನಿಕ ಶಿಕ್ಷಣ ಪಡೆಯಬೇಕು. ಭಾರತದಲ್ಲಿ ಈ ಯೋಜನೆ ಜಾರಿಯಾಗಿರುವುದು ಅತ್ಯುತ್ತಮವಾಗಿದೆ ಎಂದರು.
ನಾಲ್ಕು ವರ್ಷದ ಸೇವೆ ಬಳಿಕ ಅಗ್ನಿವೀರರಿಗೆ ಮಿಲಿಟರಿಯ ಬೇರೆ ವಿಭಾಗಗಳು, ಸರ್ಕಾರದ ಇತರ ಹುದ್ದೆಗಳು, ಖಾಸಗಿ ಕಂಪೆನಿಗಳಲ್ಲಿಯೂ ಕೆಲಸ ಮಾಡುವುದಕ್ಕೆ ಅವಕಾಶವಿದೆ. ರಾಜಕೀಯ ದೃಷ್ಟಿಯಿಂದ ಈ ಯೋಜನೆಯನ್ನು ನೋಡದೆ ದೇಶದ ಹಿತದ ದೃಷ್ಟಿಯಿಂದ ನೋಡಬೇಕು. ಅಭಿವೃದ್ದಿಶೀಲ ರಾಷ್ಟ್ರಗಳಲ್ಲಿ ಈ ಯೋಜನೆಯಿಂದಾಗಿ ಹೆಚ್ಚು ಲಾಭವಾಗಿರುವುದರಿಂದ ಭಾರತದ ಹೆಜ್ಜೆಯೂ ದೇಶಕ್ಕೆ ಒಳ್ಳೆಯದಾಗಲಿದೆ ಎಂದವರು ತಿಳಿಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…