ಮೈಸೂರು: ಅಗ್ನಿಪಥ್ ಯೋಜನೆಗೆ ವಿರೋಧ ಮಾಡಬಾರದು. ಇದೊಂದು ಆದರ್ಶಪ್ರಾಯ ಯೋಜನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಸ್ವಗ್ರಾಮ ಮದ್ದೂರಿನ ಸೋಮನಹಳ್ಳಿಯಲ್ಲಿ ಸಹೋದರ ದಿವಂಗತ ಎಸ್.ಎಂ. ಶಂಕರ್ ಮೆಮೋರಿಯಲ್ ಟ್ರಸ್ಟ್ ಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಾವಧಿಗೆ ಸೇನೆಗೆ ಯುವಕರನ್ನು ನೇಮಿಸಿಕೊಳ್ಳುವುದು ಸ್ವಾಗತಾರ್ಹ ಕ್ರಮ. ಅಮೆರಿಕಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ 20 ವರ್ಷ ಮೇಲ್ಪಟ್ಟ ಯುವಕರು ಕಡ್ಡಾಯವಾಗಿ ಎರಡು ವರ್ಷ ಸೈನಿಕ ಶಿಕ್ಷಣ ಪಡೆಯಬೇಕು. ಭಾರತದಲ್ಲಿ ಈ ಯೋಜನೆ ಜಾರಿಯಾಗಿರುವುದು ಅತ್ಯುತ್ತಮವಾಗಿದೆ ಎಂದರು.
ನಾಲ್ಕು ವರ್ಷದ ಸೇವೆ ಬಳಿಕ ಅಗ್ನಿವೀರರಿಗೆ ಮಿಲಿಟರಿಯ ಬೇರೆ ವಿಭಾಗಗಳು, ಸರ್ಕಾರದ ಇತರ ಹುದ್ದೆಗಳು, ಖಾಸಗಿ ಕಂಪೆನಿಗಳಲ್ಲಿಯೂ ಕೆಲಸ ಮಾಡುವುದಕ್ಕೆ ಅವಕಾಶವಿದೆ. ರಾಜಕೀಯ ದೃಷ್ಟಿಯಿಂದ ಈ ಯೋಜನೆಯನ್ನು ನೋಡದೆ ದೇಶದ ಹಿತದ ದೃಷ್ಟಿಯಿಂದ ನೋಡಬೇಕು. ಅಭಿವೃದ್ದಿಶೀಲ ರಾಷ್ಟ್ರಗಳಲ್ಲಿ ಈ ಯೋಜನೆಯಿಂದಾಗಿ ಹೆಚ್ಚು ಲಾಭವಾಗಿರುವುದರಿಂದ ಭಾರತದ ಹೆಜ್ಜೆಯೂ ದೇಶಕ್ಕೆ ಒಳ್ಳೆಯದಾಗಲಿದೆ ಎಂದವರು ತಿಳಿಸಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…