Featured

ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು ? ಯಾರನ್ನು ಕೇಳಿ ಜಾರಿ ಮಾಡುತ್ತಿದ್ದೀರಿ? : ಕುಮಾರಸ್ವಾಮಿ – Vishwanews24

ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು ? ಯಾರನ್ನು ಕೇಳಿ ಜಾರಿ ಮಾಡುತ್ತಿದ್ದೀರಿ? : ಕುಮಾರಸ್ವಾಮಿ – Vishwanews24

ಹಾಸನ: ದೇಶದ ಯುವಜನರ ವಿರೋಧದ ನಡುವೆಯೂ ಹಠಕ್ಕೆ ಬಿದ್ದು ಅಗ್ನಿಪಥ್ ಯೋಜನೆಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅತೃಪ್ತ ವ್ಯಕ್ತಪಡಿಸಿದರು.

ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈಗಿರುವ ಹಳೆಯ ವ್ಯವಸ್ಥೆಯಲ್ಲಿ ಇಲ್ಲಿಯವರೆಗೂ ದೇಶದ ರಕ್ಷಣೆ ಮಾಡಲಿಲ್ಲವೆ? ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು. ಇವರಿಗೆ, ಯಾವ ಉದ್ದೇಶದಿಂದ ತರುತ್ತಿದ್ದೀರಿ ಎಂದು ಅವರು ಪ್ರಶ್ನಿಸಿದರು.

ಯಾರನ್ನು ಕೇಳಿ ಅಗ್ನಿಪಥವನ್ನು ಜಾರಿ ಮಾಡುತ್ತಿದ್ದೀರಿ? ರಕ್ಷಣೆಗೆ ಸಂಬಂಧಿಸಿದ ಸಂಸದೀಯ ಸಮಿತಿ ಶಿಫಾರಸು ಮಾಡಿತ್ತಾ? ಅಥವಾ ಈ ಯೋಜನೆಯನ್ನು ಜಾರಿಗೆ ತನ್ನಿ ಎಂದು ಸೇನೆ ಏನಾದರೂ ಶಿಫಾರಸು ಮಾಡಿತ್ತಾ? ಈ ಬಗ್ಗೆ ಕೇಂದ್ರ ಸರಕಾರ ದೇಶಕ್ಕೆ ಉತ್ತರ ನೀಡಬೇಕಿದೆ ಎಂದು ಅವರು ಆಗ್ರಹಪಡಿಸಿದರು.

ಯಾವ ಉದ್ದೇಶದಿಂದ ಏಕಾಏಕಿ ಹತ್ತು ಲಕ್ಷ ಜನ ಯುವಕರಿಗೆ ಕೆಲಸ ಕೊಡುತ್ತಿದ್ದೀರಿ? ಕ್ಷೌರದ ಶಾಪ್ ತೆರೆಯಲು ಮಿಲಿಟರಿಗೆ ಇವರನ್ನು ತೆಗೆದುಕೊಳ್ಳುತ್ತಾರೆ ಎಂದು ಕೆಲ ಬಿಜೆಪಿ ನಾಯಕರೇ ಹೇಳಿದ್ದಾರೆ. ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಲ್ಲಿಗೆ ಕರೆದುಕೊಂಡು ಹೋಗಿ ಟ್ರೈನಿಂಗ್ ಕೊಡಬೇಕಾ? ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಗ್ನಿವೀರರು ಅಂತ ಸರ್ಟಿಫಿಕೇಟ್ ಕೊಡಬೇಕಾ? ಅಗ್ನಿಪಥ ಎನ್ನುವುದು ಆರ್‌ಎಸ್‌ಎಸ್ ಐಡಿಯಾ. ಅವರ ಚಟುವಟಿಕೆಗಳನ್ನು ಸೇನೆಯೊಳಕ್ಕೆ ನುಸುಳುವಂತೆ ಮಾಡಲು ಅಗ್ನಿಪಥ್ ಜಾರಿಗೆ ತರಲಾಗುತ್ತಿದೆ. ಹಿಂದೆ ಹಿಟ್ಲರ್ ಕಾಲದಲ್ಲಿ ಇದ್ದ ನಾಜಿ ಪಡೆಯನ್ನು ಭಾರತದಲ್ಲಿ ಈಗ ತರುವಂತಹ ಒಂದು ಪ್ರಾಯೋಗಿಕವಾದ ಕಾರ್ಯಕ್ರಮ ಇದಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

21 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

21 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

22 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

23 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

23 hours ago