Featured

ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು ? ಯಾರನ್ನು ಕೇಳಿ ಜಾರಿ ಮಾಡುತ್ತಿದ್ದೀರಿ? : ಕುಮಾರಸ್ವಾಮಿ – Vishwanews24

ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು ? ಯಾರನ್ನು ಕೇಳಿ ಜಾರಿ ಮಾಡುತ್ತಿದ್ದೀರಿ? : ಕುಮಾರಸ್ವಾಮಿ – Vishwanews24

ಹಾಸನ: ದೇಶದ ಯುವಜನರ ವಿರೋಧದ ನಡುವೆಯೂ ಹಠಕ್ಕೆ ಬಿದ್ದು ಅಗ್ನಿಪಥ್ ಯೋಜನೆಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅತೃಪ್ತ ವ್ಯಕ್ತಪಡಿಸಿದರು.

ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈಗಿರುವ ಹಳೆಯ ವ್ಯವಸ್ಥೆಯಲ್ಲಿ ಇಲ್ಲಿಯವರೆಗೂ ದೇಶದ ರಕ್ಷಣೆ ಮಾಡಲಿಲ್ಲವೆ? ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು. ಇವರಿಗೆ, ಯಾವ ಉದ್ದೇಶದಿಂದ ತರುತ್ತಿದ್ದೀರಿ ಎಂದು ಅವರು ಪ್ರಶ್ನಿಸಿದರು.

ಯಾರನ್ನು ಕೇಳಿ ಅಗ್ನಿಪಥವನ್ನು ಜಾರಿ ಮಾಡುತ್ತಿದ್ದೀರಿ? ರಕ್ಷಣೆಗೆ ಸಂಬಂಧಿಸಿದ ಸಂಸದೀಯ ಸಮಿತಿ ಶಿಫಾರಸು ಮಾಡಿತ್ತಾ? ಅಥವಾ ಈ ಯೋಜನೆಯನ್ನು ಜಾರಿಗೆ ತನ್ನಿ ಎಂದು ಸೇನೆ ಏನಾದರೂ ಶಿಫಾರಸು ಮಾಡಿತ್ತಾ? ಈ ಬಗ್ಗೆ ಕೇಂದ್ರ ಸರಕಾರ ದೇಶಕ್ಕೆ ಉತ್ತರ ನೀಡಬೇಕಿದೆ ಎಂದು ಅವರು ಆಗ್ರಹಪಡಿಸಿದರು.

ಯಾವ ಉದ್ದೇಶದಿಂದ ಏಕಾಏಕಿ ಹತ್ತು ಲಕ್ಷ ಜನ ಯುವಕರಿಗೆ ಕೆಲಸ ಕೊಡುತ್ತಿದ್ದೀರಿ? ಕ್ಷೌರದ ಶಾಪ್ ತೆರೆಯಲು ಮಿಲಿಟರಿಗೆ ಇವರನ್ನು ತೆಗೆದುಕೊಳ್ಳುತ್ತಾರೆ ಎಂದು ಕೆಲ ಬಿಜೆಪಿ ನಾಯಕರೇ ಹೇಳಿದ್ದಾರೆ. ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಲ್ಲಿಗೆ ಕರೆದುಕೊಂಡು ಹೋಗಿ ಟ್ರೈನಿಂಗ್ ಕೊಡಬೇಕಾ? ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಗ್ನಿವೀರರು ಅಂತ ಸರ್ಟಿಫಿಕೇಟ್ ಕೊಡಬೇಕಾ? ಅಗ್ನಿಪಥ ಎನ್ನುವುದು ಆರ್‌ಎಸ್‌ಎಸ್ ಐಡಿಯಾ. ಅವರ ಚಟುವಟಿಕೆಗಳನ್ನು ಸೇನೆಯೊಳಕ್ಕೆ ನುಸುಳುವಂತೆ ಮಾಡಲು ಅಗ್ನಿಪಥ್ ಜಾರಿಗೆ ತರಲಾಗುತ್ತಿದೆ. ಹಿಂದೆ ಹಿಟ್ಲರ್ ಕಾಲದಲ್ಲಿ ಇದ್ದ ನಾಜಿ ಪಡೆಯನ್ನು ಭಾರತದಲ್ಲಿ ಈಗ ತರುವಂತಹ ಒಂದು ಪ್ರಾಯೋಗಿಕವಾದ ಕಾರ್ಯಕ್ರಮ ಇದಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

46 minutes ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

3 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

6 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

6 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

7 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

7 hours ago