Featured

ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು ? ಯಾರನ್ನು ಕೇಳಿ ಜಾರಿ ಮಾಡುತ್ತಿದ್ದೀರಿ? : ಕುಮಾರಸ್ವಾಮಿ – Vishwanews24

ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು ? ಯಾರನ್ನು ಕೇಳಿ ಜಾರಿ ಮಾಡುತ್ತಿದ್ದೀರಿ? : ಕುಮಾರಸ್ವಾಮಿ – Vishwanews24

ಹಾಸನ: ದೇಶದ ಯುವಜನರ ವಿರೋಧದ ನಡುವೆಯೂ ಹಠಕ್ಕೆ ಬಿದ್ದು ಅಗ್ನಿಪಥ್ ಯೋಜನೆಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅತೃಪ್ತ ವ್ಯಕ್ತಪಡಿಸಿದರು.

ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈಗಿರುವ ಹಳೆಯ ವ್ಯವಸ್ಥೆಯಲ್ಲಿ ಇಲ್ಲಿಯವರೆಗೂ ದೇಶದ ರಕ್ಷಣೆ ಮಾಡಲಿಲ್ಲವೆ? ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು. ಇವರಿಗೆ, ಯಾವ ಉದ್ದೇಶದಿಂದ ತರುತ್ತಿದ್ದೀರಿ ಎಂದು ಅವರು ಪ್ರಶ್ನಿಸಿದರು.

ಯಾರನ್ನು ಕೇಳಿ ಅಗ್ನಿಪಥವನ್ನು ಜಾರಿ ಮಾಡುತ್ತಿದ್ದೀರಿ? ರಕ್ಷಣೆಗೆ ಸಂಬಂಧಿಸಿದ ಸಂಸದೀಯ ಸಮಿತಿ ಶಿಫಾರಸು ಮಾಡಿತ್ತಾ? ಅಥವಾ ಈ ಯೋಜನೆಯನ್ನು ಜಾರಿಗೆ ತನ್ನಿ ಎಂದು ಸೇನೆ ಏನಾದರೂ ಶಿಫಾರಸು ಮಾಡಿತ್ತಾ? ಈ ಬಗ್ಗೆ ಕೇಂದ್ರ ಸರಕಾರ ದೇಶಕ್ಕೆ ಉತ್ತರ ನೀಡಬೇಕಿದೆ ಎಂದು ಅವರು ಆಗ್ರಹಪಡಿಸಿದರು.

ಯಾವ ಉದ್ದೇಶದಿಂದ ಏಕಾಏಕಿ ಹತ್ತು ಲಕ್ಷ ಜನ ಯುವಕರಿಗೆ ಕೆಲಸ ಕೊಡುತ್ತಿದ್ದೀರಿ? ಕ್ಷೌರದ ಶಾಪ್ ತೆರೆಯಲು ಮಿಲಿಟರಿಗೆ ಇವರನ್ನು ತೆಗೆದುಕೊಳ್ಳುತ್ತಾರೆ ಎಂದು ಕೆಲ ಬಿಜೆಪಿ ನಾಯಕರೇ ಹೇಳಿದ್ದಾರೆ. ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಲ್ಲಿಗೆ ಕರೆದುಕೊಂಡು ಹೋಗಿ ಟ್ರೈನಿಂಗ್ ಕೊಡಬೇಕಾ? ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಗ್ನಿವೀರರು ಅಂತ ಸರ್ಟಿಫಿಕೇಟ್ ಕೊಡಬೇಕಾ? ಅಗ್ನಿಪಥ ಎನ್ನುವುದು ಆರ್‌ಎಸ್‌ಎಸ್ ಐಡಿಯಾ. ಅವರ ಚಟುವಟಿಕೆಗಳನ್ನು ಸೇನೆಯೊಳಕ್ಕೆ ನುಸುಳುವಂತೆ ಮಾಡಲು ಅಗ್ನಿಪಥ್ ಜಾರಿಗೆ ತರಲಾಗುತ್ತಿದೆ. ಹಿಂದೆ ಹಿಟ್ಲರ್ ಕಾಲದಲ್ಲಿ ಇದ್ದ ನಾಜಿ ಪಡೆಯನ್ನು ಭಾರತದಲ್ಲಿ ಈಗ ತರುವಂತಹ ಒಂದು ಪ್ರಾಯೋಗಿಕವಾದ ಕಾರ್ಯಕ್ರಮ ಇದಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

10 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

10 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

10 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

13 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

14 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

14 hours ago