Featured

ಅಗ್ನಿಪಥ್ ಯೋಜನೆ ವಿರುದ್ಧ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ – Vishwanews24

ಅಗ್ನಿಪಥ್ ಯೋಜನೆ ವಿರುದ್ಧ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಅಗ್ನಿಪಥ್ ಯೋಜನೆಗೆ ಅರ್ಥವಿಲ್ಲ : ನಲಪ್ಪಾಡ್

ಅಗ್ನಿಪಥ್ ಯೋಜನೆ ದೇಶಕ್ಕೆ ಮಾರಕ : ಯು.ಟಿ.ಖಾದರ್

ಮಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ಅಗ್ನಿಪಥ್ ಯೋಜನೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ರಾತ್ರಿ ನಗರದ ಕ್ಲಾಕ್‌ಟವರ್ ಬಳಿ ಪ್ರತಿಭಟಿಸಿದರು.

ಈ ಸಂದರ್ಭ ರಸ್ತೆ ತಡೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಹಮ್ಮದ್ ನಲಪ್ಪಾಡ್ ಮಾತನಾಡಿ ‘ಕೇವಲ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಅಗ್ನಿಪಥ್ ಯೋಜನೆಗೆ ಅರ್ಥವಿಲ್ಲ. ಪಿಯುಸಿ ಕಲಿಯುವ ವಯಸ್ಸಿನಲ್ಲಿ ಸೈನ್ಯ ಸೇರಿದರೆ ಆತ ಪದವಿ ಸಹಿತ ಮತ್ತಿತರ ಕೋರ್ಸ್‌ಗಳನ್ನು ಕಲಿಯುವುದು ಯಾವಾಗ ? ನಾಲ್ಕು ವರ್ಷದ ಬಳಿಕ ಆತ ಏನು ಮಾಡಬೇಕು ?

ಇವರು ಮಂಗಳೂರನ್ನು ಕೇಸರೀಕರಣಕ್ಕೆ ಪ್ರಖ್ಯಾತಗೊಳಿಸಿದ್ದಾರೆ. ಅಗ್ನಿಪಥ್ ಯೋಜನೆಯಲ್ಲಿ ಕೇವಲ 4 ವರ್ಷ ಸೇನೆಗೆ ಕರೆಯಿಸಿ ಆಮೇಲೆ ರಿಟ್ಯಾರ್ಡ್ ಆಯ್ತು ಮನೆಗೆ ಹೋಗಿ ಅನ್ನೋದು ಎಷ್ಟು ಸರಿ…? 80000 ಯೋಧರನ್ನು ತೆಗೆದುಕೊಳ್ಳುವ ಬದಲಿಗೆ ಕೇವಲ 46000 ಯೋಧರನ್ನೇ ತೆಗೆದುಕೊಳ್ಳಬೇಕು ಅಂತಾರೆ.

ಆದ್ರೂ ಅಷ್ಟು ಜನಕ್ಕೂ ಕೂಡಾ 15 ವರ್ಷ ಸರ್ವೀಸ್ ಇಲ್ಲ. ಕೇವಲ ನಾಲ್ಕೇ ವರ್ಷ. ಪೆಂಕ್ಷನ್ ಕೂಡಾ ಇಲ್ಲ, ಅವನಿಗೆ 17 ವರ್ಷದಲ್ಲಿ ಒಂದು ಡಿಗ್ರಿ ಕೂಡಾ ಇರುವುದಿಲ್ಲ.

ಬಿಜೆಪಿ ಸರ್ಕಾರ ಕೇವಲ 3 ಕಂಪೆನಿಗಳಿಗೆ ಮಾತ್ರ ಸೀಮಿತ. ನೀವು ಹೇಳಿರೋದು 2 ಕೋಟಿ ಕೆಲಸ. ಆದ್ರೆ ಇಲ್ಲಿಯವರೆಗೆ ನೀವು 16 ಕೋಟಿ ಕೆಲಸ ಕೊಡಬೇಕಿತ್ತು. ಆದರೆ ಕೋವಿಡ್‌ನಲ್ಲಿ ಮಾತ್ರ ವರ್ಷಕ್ಕೆ 2 ಕೋಟಿ ಜನ ಕೆಲಸ ಕಳೆದುಕೊಂಡಿದ್ದಾರೆ.

ಅವರಿಗೆ ಏನೂ ಮಾಡಿಲ್ಲ, ಸತ್ತೋದವರಿಗೆ ಕೂಡಾ ಏನು ಮಾಡಿಲ್ಲ, ಬಿಸಿನೆಸ್‌ನಲ್ಲಿ ಸೋತವರಿಗೆ ಕೂಡಾ ಏನೂ ಮಾಡಿಲ್ಲ. ಅಗ್ನಿಪಥ್ ಎಂಬ ಯೋಜನೆ ನಮ್ಮ ಯುವಕರನ್ನು ಹಾಳು ಮಾಡಲು ಇರುವ ಯೋಜನೆಯಾಗಿದೆ. ಪಿಎಸ್‌ಐ ಹಗರಣದಲ್ಲಿ 40 ಕಮಿಷನ್ ಹೊಡೆಯುವ ಹಾಗೆ ಇನ್ನು ಆರ್ಮಿಯಲ್ಲೂ ಕಮಿಷನ್ ಹೊಡೆಯೋ ಪ್ಲಾನಾ ..? ಎಂದು ಖಾರವಾಗಿ ಪ್ರಶ್ನಿಸಿದರು.

ಶಾಸಕ ಯು.ಟಿ.ಖಾದರ್ ಮಾತನಾಡಿ ‘ಯುವಕರ ಶಿಕ್ಷಣ ಮತ್ತು ಉದ್ಯೋಗದ ಹಕ್ಕನ್ನು ಕಸಿಯುವ ಕೇಂದ್ರದ ಅಗ್ನಿಪಥ್ ಯೋಜನೆಯು ದೇಶಕ್ಕೆ ಮಾರಕವಾಗಿದೆ’ ಎಂದರು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಮುಖಂಡ ಹೇಮನಾಥ್ ಶೆಟ್ಟಿ ಪುತ್ತೂರು, ಯುವ ಕಾಂಗ್ರೆಸ್ ಮುಖಂಡರಾದ ನಾಸಿರ್ ಸಾಮಣಿಗೆ, ಗಿರೀಶ್ ಆಳ್ವ, ಮೇರಿಲ್ ರೇಗೊ, ಆಶಿತ್ ಪಿರೇರಾ, ಸುರಯ್ಯಾ ಅಂಜುಮ್, ಫಿರೋಝ್ ಮಲಾರ್ ಮತ್ತಿತರರು ಪಾಲ್ಗೊಂಡಿದ್ದರು.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

12 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

12 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

12 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

12 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

12 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

13 hours ago