Featured

ಅಗ್ನಿಪಥ್ ಯೋಜನೆ ವಿರುದ್ಧ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ – Vishwanews24

ಅಗ್ನಿಪಥ್ ಯೋಜನೆ ವಿರುದ್ಧ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಅಗ್ನಿಪಥ್ ಯೋಜನೆಗೆ ಅರ್ಥವಿಲ್ಲ : ನಲಪ್ಪಾಡ್

ಅಗ್ನಿಪಥ್ ಯೋಜನೆ ದೇಶಕ್ಕೆ ಮಾರಕ : ಯು.ಟಿ.ಖಾದರ್

ಮಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ಅಗ್ನಿಪಥ್ ಯೋಜನೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ರಾತ್ರಿ ನಗರದ ಕ್ಲಾಕ್‌ಟವರ್ ಬಳಿ ಪ್ರತಿಭಟಿಸಿದರು.

ಈ ಸಂದರ್ಭ ರಸ್ತೆ ತಡೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಹಮ್ಮದ್ ನಲಪ್ಪಾಡ್ ಮಾತನಾಡಿ ‘ಕೇವಲ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಅಗ್ನಿಪಥ್ ಯೋಜನೆಗೆ ಅರ್ಥವಿಲ್ಲ. ಪಿಯುಸಿ ಕಲಿಯುವ ವಯಸ್ಸಿನಲ್ಲಿ ಸೈನ್ಯ ಸೇರಿದರೆ ಆತ ಪದವಿ ಸಹಿತ ಮತ್ತಿತರ ಕೋರ್ಸ್‌ಗಳನ್ನು ಕಲಿಯುವುದು ಯಾವಾಗ ? ನಾಲ್ಕು ವರ್ಷದ ಬಳಿಕ ಆತ ಏನು ಮಾಡಬೇಕು ?

ಇವರು ಮಂಗಳೂರನ್ನು ಕೇಸರೀಕರಣಕ್ಕೆ ಪ್ರಖ್ಯಾತಗೊಳಿಸಿದ್ದಾರೆ. ಅಗ್ನಿಪಥ್ ಯೋಜನೆಯಲ್ಲಿ ಕೇವಲ 4 ವರ್ಷ ಸೇನೆಗೆ ಕರೆಯಿಸಿ ಆಮೇಲೆ ರಿಟ್ಯಾರ್ಡ್ ಆಯ್ತು ಮನೆಗೆ ಹೋಗಿ ಅನ್ನೋದು ಎಷ್ಟು ಸರಿ…? 80000 ಯೋಧರನ್ನು ತೆಗೆದುಕೊಳ್ಳುವ ಬದಲಿಗೆ ಕೇವಲ 46000 ಯೋಧರನ್ನೇ ತೆಗೆದುಕೊಳ್ಳಬೇಕು ಅಂತಾರೆ.

ಆದ್ರೂ ಅಷ್ಟು ಜನಕ್ಕೂ ಕೂಡಾ 15 ವರ್ಷ ಸರ್ವೀಸ್ ಇಲ್ಲ. ಕೇವಲ ನಾಲ್ಕೇ ವರ್ಷ. ಪೆಂಕ್ಷನ್ ಕೂಡಾ ಇಲ್ಲ, ಅವನಿಗೆ 17 ವರ್ಷದಲ್ಲಿ ಒಂದು ಡಿಗ್ರಿ ಕೂಡಾ ಇರುವುದಿಲ್ಲ.

ಬಿಜೆಪಿ ಸರ್ಕಾರ ಕೇವಲ 3 ಕಂಪೆನಿಗಳಿಗೆ ಮಾತ್ರ ಸೀಮಿತ. ನೀವು ಹೇಳಿರೋದು 2 ಕೋಟಿ ಕೆಲಸ. ಆದ್ರೆ ಇಲ್ಲಿಯವರೆಗೆ ನೀವು 16 ಕೋಟಿ ಕೆಲಸ ಕೊಡಬೇಕಿತ್ತು. ಆದರೆ ಕೋವಿಡ್‌ನಲ್ಲಿ ಮಾತ್ರ ವರ್ಷಕ್ಕೆ 2 ಕೋಟಿ ಜನ ಕೆಲಸ ಕಳೆದುಕೊಂಡಿದ್ದಾರೆ.

ಅವರಿಗೆ ಏನೂ ಮಾಡಿಲ್ಲ, ಸತ್ತೋದವರಿಗೆ ಕೂಡಾ ಏನು ಮಾಡಿಲ್ಲ, ಬಿಸಿನೆಸ್‌ನಲ್ಲಿ ಸೋತವರಿಗೆ ಕೂಡಾ ಏನೂ ಮಾಡಿಲ್ಲ. ಅಗ್ನಿಪಥ್ ಎಂಬ ಯೋಜನೆ ನಮ್ಮ ಯುವಕರನ್ನು ಹಾಳು ಮಾಡಲು ಇರುವ ಯೋಜನೆಯಾಗಿದೆ. ಪಿಎಸ್‌ಐ ಹಗರಣದಲ್ಲಿ 40 ಕಮಿಷನ್ ಹೊಡೆಯುವ ಹಾಗೆ ಇನ್ನು ಆರ್ಮಿಯಲ್ಲೂ ಕಮಿಷನ್ ಹೊಡೆಯೋ ಪ್ಲಾನಾ ..? ಎಂದು ಖಾರವಾಗಿ ಪ್ರಶ್ನಿಸಿದರು.

ಶಾಸಕ ಯು.ಟಿ.ಖಾದರ್ ಮಾತನಾಡಿ ‘ಯುವಕರ ಶಿಕ್ಷಣ ಮತ್ತು ಉದ್ಯೋಗದ ಹಕ್ಕನ್ನು ಕಸಿಯುವ ಕೇಂದ್ರದ ಅಗ್ನಿಪಥ್ ಯೋಜನೆಯು ದೇಶಕ್ಕೆ ಮಾರಕವಾಗಿದೆ’ ಎಂದರು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಮುಖಂಡ ಹೇಮನಾಥ್ ಶೆಟ್ಟಿ ಪುತ್ತೂರು, ಯುವ ಕಾಂಗ್ರೆಸ್ ಮುಖಂಡರಾದ ನಾಸಿರ್ ಸಾಮಣಿಗೆ, ಗಿರೀಶ್ ಆಳ್ವ, ಮೇರಿಲ್ ರೇಗೊ, ಆಶಿತ್ ಪಿರೇರಾ, ಸುರಯ್ಯಾ ಅಂಜುಮ್, ಫಿರೋಝ್ ಮಲಾರ್ ಮತ್ತಿತರರು ಪಾಲ್ಗೊಂಡಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 minutes ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago