ಲಖನೌ: ಅಗ್ನಿಪಥ್ ಯೋಜನೆ ವಿರೋಧಿಸಿ ಗಲಭೆ ಎಬ್ಬಿಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.
ಪ್ರತಿಭಟನೆಯ ಹೆಸರಿನಲ್ಲಿ ರೈಲಿಗೆ ಬೆಂಕಿ ಹಚ್ಚುವುದು, ಕಲ್ಲು ತೂರಾಟ ನಡೆಸುವ ಮೂಲಕ ಕೋಟ್ಯಾಂತರ ರೂ. ನಷ್ಟ ಮಾಡಿದ್ದಾರೆ ಹೀಗಾಗಿ ಹಿಂಸಾಚಾರದಲ್ಲಿ ಭಾಗಿಯಾದವರಿಂದಲೇ ನಷ್ಟ ವಸೂಲಿ ಮಾಡಿಕೊಳ್ಳುವುದಾಗಿ ನಿರ್ಧರಿಸಲಾಗಿದೆ ಎಂದು ಅಡಿಷನಲ್ ಡೈರೆಕ್ಟರ್ ಜನರಲ್ (ಲಾ ಅಂಡ್ ಆರ್ಡರ್ ) ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ.
ಪ್ರತಿಭಟನಾಕಾರರು 36 ಬಸ್ಗಳಿಗೆ ಹಾನಿ ಮಾಡಿದ್ದು, ಸರ್ಕಾರಕ್ಕೆ ಇದರಿಂದ 12 ಲಕ್ಷ ರೂ,ಗಳಿಗೂ ಹೆಚ್ಚು ನಷ್ಟ ಉಂಟಾಗಿದೆ. ಅಲ್ಲದೆ ವಿವಿಧ ರೀತಿಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದ್ದು, ಎಲ್ಲಾ ನಷ್ಟವನ್ನು ಹಿಂಸಾಚಾರ ನಡೆಸಿದವರಿಂದಲೇ ಭರಿಸಲಾಗುವುದು. ಈವರೆಗೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 49 ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಅಲ್ಲದೆ ಈವರೆಗೆ ಬಂಧಿತರ ಸಂಖ್ಯೆ 525ಕ್ಕೆ ಏರಿಕೆಯಾಗಿದೆ ಎಂದವರು ತಿಳಿಸಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…