ಬೆಂಗಳೂರು: ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುತಿದ್ದು ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ ಎಂದು ದಿನೇಶ್ ಗುಂಡುರಾವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ.ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ. ಈಗ ಅಗ್ನಿಪಥ್ ಯೋಜನೆಯ ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೆ.ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು ಎಂದು ಪ್ರಶ್ನಿಸಿದ್ದಾರೆ
ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು.ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ.ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು. ಸೈನಿಕರ ಪಿಂಚಣಿ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ನಮ್ಮ ದೇಶ ನಿರ್ಗತಿಕವೇ? ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಯವರಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ ಎಂದು ಕೇಳಿದ್ದಾರೆ.
ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಮಾತು ತಪ್ಪಿದ್ದಾರೆ.ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…