Featured

ಅಗ್ನಿಪಥ್ ಯೋಜನೆ : ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಬಿಜೆಪಿ ಯ ನಾಟಕದ ಒಂದು ಭಾಗ : ಕೇಂದ್ರ ಸರ್ಕಾರದ ವಿರುದ್ದ ದಿನೇಶ್ ಗುಂಡುರಾವ್ – Vishwanews24

ಅಗ್ನಿಪಥ್ ಯೋಜನೆ : ಸೇನಾ ನೇಮಕಾತಿ ಅಲ್ಪಾವಧಿ , ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ..

ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ..

ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳು ಸೈನ್ಯ ಸೇರುವುದಿಲ್ಲ

ಮೋದಿಯವರ ನಾಟಕ ನಂಬಲು ಯುವಕರು ಮೂರ್ಖರಲ್ಲ..

ಬೆಂಗಳೂರು: ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುತಿದ್ದು ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ ಎಂದು ದಿನೇಶ್ ಗುಂಡುರಾವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ.ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ. ಈಗ ಅಗ್ನಿಪಥ್ ಯೋಜನೆಯ ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೆ.‌ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು ಎಂದು ಪ್ರಶ್ನಿಸಿದ್ದಾರೆ

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು.ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ.ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು. ಸೈನಿಕರ ಪಿಂಚಣಿ‌ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ನಮ್ಮ ದೇಶ ನಿರ್ಗತಿಕವೇ? ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಯವರಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ ಎಂದು ಕೇಳಿದ್ದಾರೆ.

ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಮಾತು ತಪ್ಪಿದ್ದಾರೆ.‌ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

5 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

6 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

6 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

8 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

8 hours ago