ನವದೆಹಲಿ: ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಭಾರತೀಯ ಸೇನೆಯು ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಎಲ್ಲ ಉದ್ಯೋಗಾಕಾಂಕ್ಷಿಗಳು ಸೇನೆಯ ನೇಮಕಾತಿ ಜಾಲತಾಣದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಸೇನೆ ತಿಳಿಸಿದೆ.
ಜುಲೈನಿಂದ ನೋಂದಣಿ ಆರಂಭವಾಗಲಿದೆ ಎಂದು ಅದು ಹೇಳಿದೆ.
ಭಾರತೀಯ ಸೇನೆಯಲ್ಲಿ ‘ಅಗ್ನಿವೀರ’ರದ್ದು ಒಂದು ವಿಶಿಷ್ಟ ಶ್ರೇಣಿಯಾಗಿದ್ದು, ಅಸ್ತಿತ್ವದಲ್ಲಿರುವ ಯಾವುದೇ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ ಎಂದು ಸೇನೆ ಹೇಳಿದೆ.
ಸೇನೆಯು ಕಳೆದ ರಾತ್ರಿ ಬಿಡುಗಡೆ ಮಾಡಿರುವ ಈ ಯೋಜನೆಯ ವಿವರವಾದ ಟಿಪ್ಪಣಿಯಲ್ಲಿ ‘ಅಗ್ನಿವೀರ’ರು ನಾಲ್ಕು ವರ್ಷಗಳ ಸೇವಾ ಅವಧಿಯಲ್ಲಿ ಗಳಿಸಿದ ವರ್ಗೀಕೃತ ಮಾಹಿತಿ ಅಥವಾ ಮೂಲವನ್ನು ಯಾವುದೇ ಅನಧಿಕೃತ ವ್ಯಕ್ತಿಗೆ ಬಹಿರಂಗಪಡಿಸುವುದನ್ನು ಅಧಿಕೃತ ರಹಸ್ಯ ಕಾಯಿದೆ, 1923 ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.
‘ಈ ಯೋಜನೆಯ ಜಾರಿಯೊಂದಿಗೆ, ವೈದ್ಯಕೀಯ ಶಾಖೆಯ ತಾಂತ್ರಿಕ ವರ್ಗಗಳನ್ನು ಹೊರತುಪಡಿಸಿ ಭಾರತೀಯ ಸೇನೆಯ ಸಾಮಾನ್ಯ ಕೇಡರ್ನಲ್ಲಿ ಯೋಧರ ದಾಖಲಾತಿಗೆ ಅಗ್ನಿವೀರರಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಸಿಬ್ಬಂದಿಯನ್ನು ಮಾತ್ರ ಪರಿಗಣಿಸಲಾಗುತ್ತದೆ’ಎಂದು ಅದು ಹೇಳಿದೆ.
ಇದೇವೇಳೆ, ನಿಗದಿತ ಅವಧಿಗಿಂತ ಮೊದಲು ಅಗ್ನಿವೀರರನ್ನು ಅವರ ಮನವಿ ಮೇರೆಗೆ ಸೇವೆಯಿಂದ ಬಿಡುಗಡೆ ಮಾಡುವ ಅವಕಾಶ ಇಲ್ಲ ಎಂದು ಅದು ಹೇಳಿದೆ.
‘ಆದರೂ ವಿಶೇಷ ಸಂದರ್ಭಗಳಲ್ಲಿ, ಈ ಯೋಜನೆಯಡಿಯಲ್ಲಿ ದಾಖಲಾಗಿರುವ ಸಿಬ್ಬಂದಿಯನ್ನು ಸಕ್ಷಮ ಪ್ರಾಧಿಕಾರವು ಮಂಜೂರು ಮಾಡಿದರೆ ಸೇವೆಯಿಂದ ಬಿಡುಗಡೆ ಮಾಡಬಹುದು’ಎಂದು ಅದು ಹೇಳಿದೆ.
ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…
ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ…
ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್…
ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ : ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ…
ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ ನವದೆಹಲಿ: ಭಾರತೀಯ ಶೂಟಿಂಗ್ ದಂತಕಥೆ ಮತ್ತು ಪ್ರಸಿದ್ಧ ತರಬೇತುದಾರ…
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಶಿವಮೊಗ್ಗ: ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ಆಗುಂಬೆ ಘಾಟ್ನಲ್ಲಿ ಭಾರಿ ವಾಹನಗಳ…