Featured

ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ – Vishwanews24

ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ

ನವದೆಹಲಿ: ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಭಾರತೀಯ ಸೇನೆಯು ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಎಲ್ಲ ಉದ್ಯೋಗಾಕಾಂಕ್ಷಿಗಳು ಸೇನೆಯ ನೇಮಕಾತಿ ಜಾಲತಾಣದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಸೇನೆ ತಿಳಿಸಿದೆ.

ಜುಲೈನಿಂದ ನೋಂದಣಿ ಆರಂಭವಾಗಲಿದೆ ಎಂದು ಅದು ಹೇಳಿದೆ.

ಭಾರತೀಯ ಸೇನೆಯಲ್ಲಿ ‘ಅಗ್ನಿವೀರ’ರದ್ದು ಒಂದು ವಿಶಿಷ್ಟ ಶ್ರೇಣಿಯಾಗಿದ್ದು, ಅಸ್ತಿತ್ವದಲ್ಲಿರುವ ಯಾವುದೇ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ ಎಂದು ಸೇನೆ ಹೇಳಿದೆ.

ಸೇನೆಯು ಕಳೆದ ರಾತ್ರಿ ಬಿಡುಗಡೆ ಮಾಡಿರುವ ಈ ಯೋಜನೆಯ ವಿವರವಾದ ಟಿಪ್ಪಣಿಯಲ್ಲಿ ‘ಅಗ್ನಿವೀರ’ರು ನಾಲ್ಕು ವರ್ಷಗಳ ಸೇವಾ ಅವಧಿಯಲ್ಲಿ ಗಳಿಸಿದ ವರ್ಗೀಕೃತ ಮಾಹಿತಿ ಅಥವಾ ಮೂಲವನ್ನು ಯಾವುದೇ ಅನಧಿಕೃತ ವ್ಯಕ್ತಿಗೆ ಬಹಿರಂಗಪಡಿಸುವುದನ್ನು ಅಧಿಕೃತ ರಹಸ್ಯ ಕಾಯಿದೆ, 1923 ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

‘ಈ ಯೋಜನೆಯ ಜಾರಿಯೊಂದಿಗೆ, ವೈದ್ಯಕೀಯ ಶಾಖೆಯ ತಾಂತ್ರಿಕ ವರ್ಗಗಳನ್ನು ಹೊರತುಪಡಿಸಿ ಭಾರತೀಯ ಸೇನೆಯ ಸಾಮಾನ್ಯ ಕೇಡರ್‌ನಲ್ಲಿ ಯೋಧರ ದಾಖಲಾತಿಗೆ ಅಗ್ನಿವೀರರಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಸಿಬ್ಬಂದಿಯನ್ನು ಮಾತ್ರ ಪರಿಗಣಿಸಲಾಗುತ್ತದೆ’ಎಂದು ಅದು ಹೇಳಿದೆ.

ಇದೇವೇಳೆ, ನಿಗದಿತ ಅವಧಿಗಿಂತ ಮೊದಲು ಅಗ್ನಿವೀರರನ್ನು ಅವರ ಮನವಿ ಮೇರೆಗೆ ಸೇವೆಯಿಂದ ಬಿಡುಗಡೆ ಮಾಡುವ ಅವಕಾಶ ಇಲ್ಲ ಎಂದು ಅದು ಹೇಳಿದೆ.

‘ಆದರೂ ವಿಶೇಷ ಸಂದರ್ಭಗಳಲ್ಲಿ, ಈ ಯೋಜನೆಯಡಿಯಲ್ಲಿ ದಾಖಲಾಗಿರುವ ಸಿಬ್ಬಂದಿಯನ್ನು ಸಕ್ಷಮ ಪ್ರಾಧಿಕಾರವು ಮಂಜೂರು ಮಾಡಿದರೆ ಸೇವೆಯಿಂದ ಬಿಡುಗಡೆ ಮಾಡಬಹುದು’ಎಂದು ಅದು ಹೇಳಿದೆ.

Vishwa News 24

Recent Posts

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

15 minutes ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

22 minutes ago

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ…

31 minutes ago

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ – vishwanews24

ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ ಚೆನ್ನೈ: ನಟಿ ತ್ರಿಷಾ  ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ…

37 minutes ago

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ…

51 minutes ago

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ,…

57 minutes ago