ನವದೆಹಲಿ: ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಭಾರತೀಯ ಸೇನೆಯು ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಎಲ್ಲ ಉದ್ಯೋಗಾಕಾಂಕ್ಷಿಗಳು ಸೇನೆಯ ನೇಮಕಾತಿ ಜಾಲತಾಣದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಸೇನೆ ತಿಳಿಸಿದೆ.
ಜುಲೈನಿಂದ ನೋಂದಣಿ ಆರಂಭವಾಗಲಿದೆ ಎಂದು ಅದು ಹೇಳಿದೆ.
ಭಾರತೀಯ ಸೇನೆಯಲ್ಲಿ ‘ಅಗ್ನಿವೀರ’ರದ್ದು ಒಂದು ವಿಶಿಷ್ಟ ಶ್ರೇಣಿಯಾಗಿದ್ದು, ಅಸ್ತಿತ್ವದಲ್ಲಿರುವ ಯಾವುದೇ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ ಎಂದು ಸೇನೆ ಹೇಳಿದೆ.
ಸೇನೆಯು ಕಳೆದ ರಾತ್ರಿ ಬಿಡುಗಡೆ ಮಾಡಿರುವ ಈ ಯೋಜನೆಯ ವಿವರವಾದ ಟಿಪ್ಪಣಿಯಲ್ಲಿ ‘ಅಗ್ನಿವೀರ’ರು ನಾಲ್ಕು ವರ್ಷಗಳ ಸೇವಾ ಅವಧಿಯಲ್ಲಿ ಗಳಿಸಿದ ವರ್ಗೀಕೃತ ಮಾಹಿತಿ ಅಥವಾ ಮೂಲವನ್ನು ಯಾವುದೇ ಅನಧಿಕೃತ ವ್ಯಕ್ತಿಗೆ ಬಹಿರಂಗಪಡಿಸುವುದನ್ನು ಅಧಿಕೃತ ರಹಸ್ಯ ಕಾಯಿದೆ, 1923 ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.
‘ಈ ಯೋಜನೆಯ ಜಾರಿಯೊಂದಿಗೆ, ವೈದ್ಯಕೀಯ ಶಾಖೆಯ ತಾಂತ್ರಿಕ ವರ್ಗಗಳನ್ನು ಹೊರತುಪಡಿಸಿ ಭಾರತೀಯ ಸೇನೆಯ ಸಾಮಾನ್ಯ ಕೇಡರ್ನಲ್ಲಿ ಯೋಧರ ದಾಖಲಾತಿಗೆ ಅಗ್ನಿವೀರರಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಸಿಬ್ಬಂದಿಯನ್ನು ಮಾತ್ರ ಪರಿಗಣಿಸಲಾಗುತ್ತದೆ’ಎಂದು ಅದು ಹೇಳಿದೆ.
ಇದೇವೇಳೆ, ನಿಗದಿತ ಅವಧಿಗಿಂತ ಮೊದಲು ಅಗ್ನಿವೀರರನ್ನು ಅವರ ಮನವಿ ಮೇರೆಗೆ ಸೇವೆಯಿಂದ ಬಿಡುಗಡೆ ಮಾಡುವ ಅವಕಾಶ ಇಲ್ಲ ಎಂದು ಅದು ಹೇಳಿದೆ.
‘ಆದರೂ ವಿಶೇಷ ಸಂದರ್ಭಗಳಲ್ಲಿ, ಈ ಯೋಜನೆಯಡಿಯಲ್ಲಿ ದಾಖಲಾಗಿರುವ ಸಿಬ್ಬಂದಿಯನ್ನು ಸಕ್ಷಮ ಪ್ರಾಧಿಕಾರವು ಮಂಜೂರು ಮಾಡಿದರೆ ಸೇವೆಯಿಂದ ಬಿಡುಗಡೆ ಮಾಡಬಹುದು’ಎಂದು ಅದು ಹೇಳಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…