Featured

ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ – Vishwanews24

ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ

ನವದೆಹಲಿ: ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಭಾರತೀಯ ಸೇನೆಯು ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಎಲ್ಲ ಉದ್ಯೋಗಾಕಾಂಕ್ಷಿಗಳು ಸೇನೆಯ ನೇಮಕಾತಿ ಜಾಲತಾಣದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಸೇನೆ ತಿಳಿಸಿದೆ.

ಜುಲೈನಿಂದ ನೋಂದಣಿ ಆರಂಭವಾಗಲಿದೆ ಎಂದು ಅದು ಹೇಳಿದೆ.

ಭಾರತೀಯ ಸೇನೆಯಲ್ಲಿ ‘ಅಗ್ನಿವೀರ’ರದ್ದು ಒಂದು ವಿಶಿಷ್ಟ ಶ್ರೇಣಿಯಾಗಿದ್ದು, ಅಸ್ತಿತ್ವದಲ್ಲಿರುವ ಯಾವುದೇ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ ಎಂದು ಸೇನೆ ಹೇಳಿದೆ.

ಸೇನೆಯು ಕಳೆದ ರಾತ್ರಿ ಬಿಡುಗಡೆ ಮಾಡಿರುವ ಈ ಯೋಜನೆಯ ವಿವರವಾದ ಟಿಪ್ಪಣಿಯಲ್ಲಿ ‘ಅಗ್ನಿವೀರ’ರು ನಾಲ್ಕು ವರ್ಷಗಳ ಸೇವಾ ಅವಧಿಯಲ್ಲಿ ಗಳಿಸಿದ ವರ್ಗೀಕೃತ ಮಾಹಿತಿ ಅಥವಾ ಮೂಲವನ್ನು ಯಾವುದೇ ಅನಧಿಕೃತ ವ್ಯಕ್ತಿಗೆ ಬಹಿರಂಗಪಡಿಸುವುದನ್ನು ಅಧಿಕೃತ ರಹಸ್ಯ ಕಾಯಿದೆ, 1923 ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

‘ಈ ಯೋಜನೆಯ ಜಾರಿಯೊಂದಿಗೆ, ವೈದ್ಯಕೀಯ ಶಾಖೆಯ ತಾಂತ್ರಿಕ ವರ್ಗಗಳನ್ನು ಹೊರತುಪಡಿಸಿ ಭಾರತೀಯ ಸೇನೆಯ ಸಾಮಾನ್ಯ ಕೇಡರ್‌ನಲ್ಲಿ ಯೋಧರ ದಾಖಲಾತಿಗೆ ಅಗ್ನಿವೀರರಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಸಿಬ್ಬಂದಿಯನ್ನು ಮಾತ್ರ ಪರಿಗಣಿಸಲಾಗುತ್ತದೆ’ಎಂದು ಅದು ಹೇಳಿದೆ.

ಇದೇವೇಳೆ, ನಿಗದಿತ ಅವಧಿಗಿಂತ ಮೊದಲು ಅಗ್ನಿವೀರರನ್ನು ಅವರ ಮನವಿ ಮೇರೆಗೆ ಸೇವೆಯಿಂದ ಬಿಡುಗಡೆ ಮಾಡುವ ಅವಕಾಶ ಇಲ್ಲ ಎಂದು ಅದು ಹೇಳಿದೆ.

‘ಆದರೂ ವಿಶೇಷ ಸಂದರ್ಭಗಳಲ್ಲಿ, ಈ ಯೋಜನೆಯಡಿಯಲ್ಲಿ ದಾಖಲಾಗಿರುವ ಸಿಬ್ಬಂದಿಯನ್ನು ಸಕ್ಷಮ ಪ್ರಾಧಿಕಾರವು ಮಂಜೂರು ಮಾಡಿದರೆ ಸೇವೆಯಿಂದ ಬಿಡುಗಡೆ ಮಾಡಬಹುದು’ಎಂದು ಅದು ಹೇಳಿದೆ.

Vishwa News 24

Recent Posts

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ – vishwanews24

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…

20 minutes ago

ಧರ್ಮಸ್ಥಳ ಬುರುಡೆ ಪ್ರಕರಣ : ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ – vishwanews24

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌…

31 minutes ago

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ – vishwanews24

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…

50 minutes ago

ನಟ ದೊಡ್ಡಣ್ಣ ನಿಧನ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ವೈರಲ್ – vishwanews24

ಆರೋಗ್ಯವಾಗಿದ್ದೇನೆ, ಆತಂಕ ಬೇಡ: ದೊಡ್ಡಣ್ಣ ಪ್ರತಿಕ್ರಿಯೆ ಬೆಂಗಳೂರು: ಹಿರಿಯ ಚಿತ್ರನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…

60 minutes ago

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಅರ್ಜಿ ಸಲ್ಲಿಸಲು ಸೂಚನೆ – vishwanews24

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್.. ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ರಾಜ್ಯದಲ್ಲಿ ಇದೇ…

1 hour ago

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ – vishwanews24

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…

2 hours ago