ಹೊಸದಿಲ್ಲಿ: ಕೇಂದ್ರದಲ್ಲಿ ರಚನೆಯಾಗಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಭಾಗವಾಗಿರುವ ನಿತೀಶ್ ಕುಮಾರ್ ಅವರ ಜೆಡಿ(ಯು) ಪಕ್ಷದ ಹಿರಿಯ ನಾಯಕ ಹಾಗೂ ವಕ್ತಾರ ಕೆ ಸಿ ತ್ಯಾಗಿ ಇಂದು ಸುದ್ದಿಗಾರರ ಜೊತೆ ಮಾತನಾಡಿ ತಮ್ಮ ಪಕ್ಷವು ಅಗ್ನಿವೀರ್ ಯೋಜನೆಯಲ್ಲಿ ಮಾರ್ಪಾಡುಗಳನ್ನು ಕೋರಿದೆ ಎಂದು ಹೇಳಿದ್ದಾರೆ.
“ಅಗ್ನಿವೀರ್ ಯೋಜನೆಯನ್ನು ಜಾರಿಗೊಳಿಸಿದ್ದಾಗಿನಿಂದ ಅದು ಭಾರೀ ಟೀಕೆಗೊಳಗಾಗಿದೆ. ಅದು ಚುನಾವಣೆಯಲ್ಲೂ ಪರಿಣಾಮ ಬೀರಿದೆ. ಸೇನೆಗೆ ನೇಮಕಾತಿಗಾಗಿ ಇರುವ ಈ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗಳ ಅಗತ್ಯವಿದೆ,” ಎಂದು ಅವರು ಹೇಳಿದ್ದಾರೆ.
“ಮತದಾರರ ಒಂದು ವರ್ಗ ಈ ಅಗ್ನಿವೀರ್ ಯೋಜನೆಯಿಂದ ಅಸಂತುಷ್ಟವಾಗಿದೆ. ಜನರು ಪ್ರಶ್ನಿಸುತ್ತಿರುವ ಈ ಯೋಜನೆಯ ಕೆಲವೊಂದು ಲೋಪಗಳನ್ನು ವಿವರವಾಗಿ ಚರ್ಚಿಸಿ ಅವುಗಳನ್ನು ಸರಿಪಡಿಸುವುದು ನಮಗೆ ಬೇಕಿದೆ, ಸಮಾನ ನಾಗರಿಕ ಸಂಹಿತೆ ವಿಚಾರದಲ್ಲಿ ನಮ್ಮ ಮುಖ್ಯಮಂತ್ರಿ ತಿಳಿಸಿದ ಹಾಗೆ ನಾವು ಅದರ ವಿರುದ್ಧವಲ್ಲ, ಆದರೆ ಎಲ್ಲಾ ಸಂಬಂಧಿತರ ಜೊತೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ,” ಎಂದು ತ್ಯಾಗಿ ಹೇಳಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…