ಹೊಸದಿಲ್ಲಿ: ಕೇಂದ್ರದಲ್ಲಿ ರಚನೆಯಾಗಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಭಾಗವಾಗಿರುವ ನಿತೀಶ್ ಕುಮಾರ್ ಅವರ ಜೆಡಿ(ಯು) ಪಕ್ಷದ ಹಿರಿಯ ನಾಯಕ ಹಾಗೂ ವಕ್ತಾರ ಕೆ ಸಿ ತ್ಯಾಗಿ ಇಂದು ಸುದ್ದಿಗಾರರ ಜೊತೆ ಮಾತನಾಡಿ ತಮ್ಮ ಪಕ್ಷವು ಅಗ್ನಿವೀರ್ ಯೋಜನೆಯಲ್ಲಿ ಮಾರ್ಪಾಡುಗಳನ್ನು ಕೋರಿದೆ ಎಂದು ಹೇಳಿದ್ದಾರೆ.
“ಅಗ್ನಿವೀರ್ ಯೋಜನೆಯನ್ನು ಜಾರಿಗೊಳಿಸಿದ್ದಾಗಿನಿಂದ ಅದು ಭಾರೀ ಟೀಕೆಗೊಳಗಾಗಿದೆ. ಅದು ಚುನಾವಣೆಯಲ್ಲೂ ಪರಿಣಾಮ ಬೀರಿದೆ. ಸೇನೆಗೆ ನೇಮಕಾತಿಗಾಗಿ ಇರುವ ಈ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗಳ ಅಗತ್ಯವಿದೆ,” ಎಂದು ಅವರು ಹೇಳಿದ್ದಾರೆ.
“ಮತದಾರರ ಒಂದು ವರ್ಗ ಈ ಅಗ್ನಿವೀರ್ ಯೋಜನೆಯಿಂದ ಅಸಂತುಷ್ಟವಾಗಿದೆ. ಜನರು ಪ್ರಶ್ನಿಸುತ್ತಿರುವ ಈ ಯೋಜನೆಯ ಕೆಲವೊಂದು ಲೋಪಗಳನ್ನು ವಿವರವಾಗಿ ಚರ್ಚಿಸಿ ಅವುಗಳನ್ನು ಸರಿಪಡಿಸುವುದು ನಮಗೆ ಬೇಕಿದೆ, ಸಮಾನ ನಾಗರಿಕ ಸಂಹಿತೆ ವಿಚಾರದಲ್ಲಿ ನಮ್ಮ ಮುಖ್ಯಮಂತ್ರಿ ತಿಳಿಸಿದ ಹಾಗೆ ನಾವು ಅದರ ವಿರುದ್ಧವಲ್ಲ, ಆದರೆ ಎಲ್ಲಾ ಸಂಬಂಧಿತರ ಜೊತೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ,” ಎಂದು ತ್ಯಾಗಿ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…