ಹೊಸದಿಲ್ಲಿ: ಕೇಂದ್ರದಲ್ಲಿ ರಚನೆಯಾಗಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಭಾಗವಾಗಿರುವ ನಿತೀಶ್ ಕುಮಾರ್ ಅವರ ಜೆಡಿ(ಯು) ಪಕ್ಷದ ಹಿರಿಯ ನಾಯಕ ಹಾಗೂ ವಕ್ತಾರ ಕೆ ಸಿ ತ್ಯಾಗಿ ಇಂದು ಸುದ್ದಿಗಾರರ ಜೊತೆ ಮಾತನಾಡಿ ತಮ್ಮ ಪಕ್ಷವು ಅಗ್ನಿವೀರ್ ಯೋಜನೆಯಲ್ಲಿ ಮಾರ್ಪಾಡುಗಳನ್ನು ಕೋರಿದೆ ಎಂದು ಹೇಳಿದ್ದಾರೆ.
“ಅಗ್ನಿವೀರ್ ಯೋಜನೆಯನ್ನು ಜಾರಿಗೊಳಿಸಿದ್ದಾಗಿನಿಂದ ಅದು ಭಾರೀ ಟೀಕೆಗೊಳಗಾಗಿದೆ. ಅದು ಚುನಾವಣೆಯಲ್ಲೂ ಪರಿಣಾಮ ಬೀರಿದೆ. ಸೇನೆಗೆ ನೇಮಕಾತಿಗಾಗಿ ಇರುವ ಈ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗಳ ಅಗತ್ಯವಿದೆ,” ಎಂದು ಅವರು ಹೇಳಿದ್ದಾರೆ.
“ಮತದಾರರ ಒಂದು ವರ್ಗ ಈ ಅಗ್ನಿವೀರ್ ಯೋಜನೆಯಿಂದ ಅಸಂತುಷ್ಟವಾಗಿದೆ. ಜನರು ಪ್ರಶ್ನಿಸುತ್ತಿರುವ ಈ ಯೋಜನೆಯ ಕೆಲವೊಂದು ಲೋಪಗಳನ್ನು ವಿವರವಾಗಿ ಚರ್ಚಿಸಿ ಅವುಗಳನ್ನು ಸರಿಪಡಿಸುವುದು ನಮಗೆ ಬೇಕಿದೆ, ಸಮಾನ ನಾಗರಿಕ ಸಂಹಿತೆ ವಿಚಾರದಲ್ಲಿ ನಮ್ಮ ಮುಖ್ಯಮಂತ್ರಿ ತಿಳಿಸಿದ ಹಾಗೆ ನಾವು ಅದರ ವಿರುದ್ಧವಲ್ಲ, ಆದರೆ ಎಲ್ಲಾ ಸಂಬಂಧಿತರ ಜೊತೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ,” ಎಂದು ತ್ಯಾಗಿ ಹೇಳಿದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…