ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು ಕೋರಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ಎರಡು ದಿನಗಳ ಹಿಂದೆ ಜಾಮೀನು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಫೆ.4ರಂದು ದಿನಾಂಕ ನಿಗದಿ ಪಡಿಸಿ ನ್ಯಾಯಾಲಯ ಆದೇಶ ನೀಡಿದೆ. ಅಂದು ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2024ರ ಅ.20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ(44) ಎಂಬವರನ್ನು ಅವರ ಪತ್ನಿ ಪ್ರತಿಮಾ(36) ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೈಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಅ.25ರಂದು ಅಜೆಕಾರು ಪೊಲೀಸರು ಬಂಧಿಸಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…