ಹಾಸನ: ಹಾಸನ ಲೋಕಸಭೆ ಕ್ಷೇತ್ರದಿಂದ ಗೆದ್ದು ಬಂದಿರುವ ಏಕೈಕ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತಮ್ಮ ತಾತ ಎಚ್.ಡಿ ದೇವೇಗೌಡ ಅವರ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ತಾತ ದೇವೇಗೌಡರು ಮತ್ತೆ ಹಾಸನದಿಂದಲೇ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಲಿ ಎಂಬ ಲೆಕ್ಕಾಚಾರದೊಂದಿಗೆ ತಮ್ಮ ಗೆಲುವನ್ನು ತ್ಯಾಗ ಮಾಡಿ ರಾಜೀನಾಮೆ ನೀಡುವುದಾಗಿ ಪ್ರಜ್ವಲ್ ಘೋಷಿಸಿದ್ದಾರೆ.
ತಾತನ ಸೋಲಿನಿಂದ ಮನಸ್ಸಿಗೆ ನೋವಾಗಿದ್ದು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಪ್ರಜ್ವಲ್ ರೇವಣ್ಣ ಘೋಷಿಸಿದ್ದಾರೆ. ಬಳಿಕ ತಾತನನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುವುದಾಗಿಯೂ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾದಾಗ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಗೌಡರ ಕುಟುಂಬದ ಮೂವರ ಪೈಕಿ ಪ್ರಜ್ವಲ್ ಮಾತ್ರ ಗೆದ್ದಿದ್ದರು. ಗೆದ್ದ ಮರುದಿನವೇ ಕ್ಷೇತ್ರದ ತ್ಯಾಗಕ್ಕೆ ಪ್ರಜ್ವಲ್ ಮುಂದಾಗಿರುವುದು ಭಾವನಾತ್ಮಕ ಒತ್ತಡದಿಂದ ಕೈಗೊಂಡ ನಡೆಯೇ ಅಥವಾ ನಿಜಕ್ಕೂ ದೇವೇಗೌಡರು ಮತ್ತೆ ಹಾಸನದಿಂದ ಸ್ಪರ್ಧಿಸಿ ಗೆದ್ದು ಸಂಸತ್ ಪ್ರವೇಶಿಸಲು ಬಯಸಿದ್ದಾರೆಯೇ ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…