Featured

ತಾತ ದೇವೇಗೌಡರಿಗಾಗಿ ಸಂಸದ ಸ್ಥಾನ ಬಿಟ್ಟು ಕೊಡಲು ಸಿರ್ಧರಿಸಿದ್ದೇನೆ : ಪ್ರಜ್ವಲ್ ರೇವಣ್ಣ -Vishwanews24

ಹಾಸನ: ಹಾಸನ ಲೋಕಸಭೆ ಕ್ಷೇತ್ರದಿಂದ ಗೆದ್ದು ಬಂದಿರುವ ಏಕೈಕ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತಮ್ಮ ತಾತ ಎಚ್.ಡಿ ದೇವೇಗೌಡ ಅವರ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ತಾತ ದೇವೇಗೌಡರು ಮತ್ತೆ ಹಾಸನದಿಂದಲೇ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಲಿ ಎಂಬ ಲೆಕ್ಕಾಚಾರದೊಂದಿಗೆ ತಮ್ಮ ಗೆಲುವನ್ನು ತ್ಯಾಗ ಮಾಡಿ ರಾಜೀನಾಮೆ ನೀಡುವುದಾಗಿ ಪ್ರಜ್ವಲ್ ಘೋಷಿಸಿದ್ದಾರೆ.

ತಾತನ ಸೋಲಿನಿಂದ ಮನಸ್ಸಿಗೆ ನೋವಾಗಿದ್ದು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಪ್ರಜ್ವಲ್ ರೇವಣ್ಣ ಘೋಷಿಸಿದ್ದಾರೆ. ಬಳಿಕ ತಾತನನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುವುದಾಗಿಯೂ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾದಾಗ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೌಡರ ಕುಟುಂಬದ ಮೂವರ ಪೈಕಿ ಪ್ರಜ್ವಲ್ ಮಾತ್ರ ಗೆದ್ದಿದ್ದರು. ಗೆದ್ದ ಮರುದಿನವೇ ಕ್ಷೇತ್ರದ ತ್ಯಾಗಕ್ಕೆ ಪ್ರಜ್ವಲ್ ಮುಂದಾಗಿರುವುದು ಭಾವನಾತ್ಮಕ ಒತ್ತಡದಿಂದ ಕೈಗೊಂಡ ನಡೆಯೇ ಅಥವಾ ನಿಜಕ್ಕೂ ದೇವೇಗೌಡರು ಮತ್ತೆ ಹಾಸನದಿಂದ ಸ್ಪರ್ಧಿಸಿ ಗೆದ್ದು ಸಂಸತ್ ಪ್ರವೇಶಿಸಲು ಬಯಸಿದ್ದಾರೆಯೇ ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ.

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

23 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

40 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

54 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago