ಹಾಸನ: ಹಾಸನ ಲೋಕಸಭೆ ಕ್ಷೇತ್ರದಿಂದ ಗೆದ್ದು ಬಂದಿರುವ ಏಕೈಕ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತಮ್ಮ ತಾತ ಎಚ್.ಡಿ ದೇವೇಗೌಡ ಅವರ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ತಾತ ದೇವೇಗೌಡರು ಮತ್ತೆ ಹಾಸನದಿಂದಲೇ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಲಿ ಎಂಬ ಲೆಕ್ಕಾಚಾರದೊಂದಿಗೆ ತಮ್ಮ ಗೆಲುವನ್ನು ತ್ಯಾಗ ಮಾಡಿ ರಾಜೀನಾಮೆ ನೀಡುವುದಾಗಿ ಪ್ರಜ್ವಲ್ ಘೋಷಿಸಿದ್ದಾರೆ.
ತಾತನ ಸೋಲಿನಿಂದ ಮನಸ್ಸಿಗೆ ನೋವಾಗಿದ್ದು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಪ್ರಜ್ವಲ್ ರೇವಣ್ಣ ಘೋಷಿಸಿದ್ದಾರೆ. ಬಳಿಕ ತಾತನನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುವುದಾಗಿಯೂ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾದಾಗ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಗೌಡರ ಕುಟುಂಬದ ಮೂವರ ಪೈಕಿ ಪ್ರಜ್ವಲ್ ಮಾತ್ರ ಗೆದ್ದಿದ್ದರು. ಗೆದ್ದ ಮರುದಿನವೇ ಕ್ಷೇತ್ರದ ತ್ಯಾಗಕ್ಕೆ ಪ್ರಜ್ವಲ್ ಮುಂದಾಗಿರುವುದು ಭಾವನಾತ್ಮಕ ಒತ್ತಡದಿಂದ ಕೈಗೊಂಡ ನಡೆಯೇ ಅಥವಾ ನಿಜಕ್ಕೂ ದೇವೇಗೌಡರು ಮತ್ತೆ ಹಾಸನದಿಂದ ಸ್ಪರ್ಧಿಸಿ ಗೆದ್ದು ಸಂಸತ್ ಪ್ರವೇಶಿಸಲು ಬಯಸಿದ್ದಾರೆಯೇ ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…