Featured

ಅಟಲ್​ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಹೊಂದಿರುವ 100 ರೂ. ನಾಣ್ಯ ಬಿಡುಗಡೆ ಮಾಡಲು ನಿರ್ಧಾರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಭಾರತದ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಇರುವ 100 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಾಣ್ಯದ ಒಂದು ಭಾದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಇರಲಿದ್ದು, ನಾಣ್ಯ 35 ಗ್ರಾಂ ತೂಕ ಇರಲಿದ್ದು, ಇದರ ಮೇಲೆ ದೇವನಾಗರಿ ಹಾಗೂ ಇಂಗ್ಲಿಷ್​ನಲ್ಲಿ ವಾಜಪೇಯಿ ಹೆಸರು ಮುದ್ರಣಗೊಳ್ಳಲಿದೆ. 1924ರಿಂದ 2018ರವರೆಗಿನ ಅವರ ಚಿತ್ರಗಳು ಇದರಲ್ಲಿ ಇರಲಿದ್ದು, ಜನ್ಮ ದಿನಾಂಕ ಹಾಗೂ ನಿಧನರಾದ ದಿನಾಂಕ ಕೂಡ ನಾಣ್ಯದಲ್ಲಿರಲಿದೆ.

ನಾಣ್ಯದ ಮತ್ತೊಂದು ಭಾಗದಲ್ಲಿ ಅಶೋಕ ಸ್ಥಂಭದ ಸಿಂಹದ ಲಾಂಛನ ಮತ್ತು ಮಧ್ಯಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ‘ಸತ್ಯಮೇವ ಜಯತೇ’ ಸಾಲು ಇರಲಿದೆ. ಎಡಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ‘ಭಾರತ್’ ಮತ್ತು ಬಲಭಾಗದಲ್ಲಿ ಇಂಗ್ಲಿಷ್‌ನಲ್ಲಿ ‘ಇಂಡಿಯಾ’ ಎಂದು ಬರೆದಿರುತ್ತದೆ. ಸಿಂಹದ ಲಾಂಛನದ ಕೆಳಗೆ ರೂಪಾಯಿ ಚಿಹ್ನೆ ಹಾಗೂ 100 ರೂ. ಎಂದು ಅಚ್ಚಾಗಲಿದೆ.

ದೇಶಕಂಡ ಅತ್ಯುತ್ತಮ ನಾಯಕ, ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕಳೆದ ಆಗಸ್ಟ್​ 16ರಂದು ತಮ್ಮ 93ನೇ ವಯಸ್ಸಿನಲ್ಲಿ ನಿಧನರಾದರು. ಅವರು 6 ವರ್ಷ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ..

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

8 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

10 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

10 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

11 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

11 hours ago