Featured

ಅಟಲ್​ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಹೊಂದಿರುವ 100 ರೂ. ನಾಣ್ಯ ಬಿಡುಗಡೆ ಮಾಡಲು ನಿರ್ಧಾರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಭಾರತದ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಇರುವ 100 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಾಣ್ಯದ ಒಂದು ಭಾದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಇರಲಿದ್ದು, ನಾಣ್ಯ 35 ಗ್ರಾಂ ತೂಕ ಇರಲಿದ್ದು, ಇದರ ಮೇಲೆ ದೇವನಾಗರಿ ಹಾಗೂ ಇಂಗ್ಲಿಷ್​ನಲ್ಲಿ ವಾಜಪೇಯಿ ಹೆಸರು ಮುದ್ರಣಗೊಳ್ಳಲಿದೆ. 1924ರಿಂದ 2018ರವರೆಗಿನ ಅವರ ಚಿತ್ರಗಳು ಇದರಲ್ಲಿ ಇರಲಿದ್ದು, ಜನ್ಮ ದಿನಾಂಕ ಹಾಗೂ ನಿಧನರಾದ ದಿನಾಂಕ ಕೂಡ ನಾಣ್ಯದಲ್ಲಿರಲಿದೆ.

ನಾಣ್ಯದ ಮತ್ತೊಂದು ಭಾಗದಲ್ಲಿ ಅಶೋಕ ಸ್ಥಂಭದ ಸಿಂಹದ ಲಾಂಛನ ಮತ್ತು ಮಧ್ಯಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ‘ಸತ್ಯಮೇವ ಜಯತೇ’ ಸಾಲು ಇರಲಿದೆ. ಎಡಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ‘ಭಾರತ್’ ಮತ್ತು ಬಲಭಾಗದಲ್ಲಿ ಇಂಗ್ಲಿಷ್‌ನಲ್ಲಿ ‘ಇಂಡಿಯಾ’ ಎಂದು ಬರೆದಿರುತ್ತದೆ. ಸಿಂಹದ ಲಾಂಛನದ ಕೆಳಗೆ ರೂಪಾಯಿ ಚಿಹ್ನೆ ಹಾಗೂ 100 ರೂ. ಎಂದು ಅಚ್ಚಾಗಲಿದೆ.

ದೇಶಕಂಡ ಅತ್ಯುತ್ತಮ ನಾಯಕ, ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕಳೆದ ಆಗಸ್ಟ್​ 16ರಂದು ತಮ್ಮ 93ನೇ ವಯಸ್ಸಿನಲ್ಲಿ ನಿಧನರಾದರು. ಅವರು 6 ವರ್ಷ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ..

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago