ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನ ಮಂತ್ರಿ ನರೇಂದ್ರ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪುಷ್ಪನಮನ ಸಲ್ಲಿಸಿದ್ದಾರೆ.
ದೆಹಲಿಯ ರಾಜ್ಘಾಟ್ನಲ್ಲಿ ಸದೈವ ಅಟಲ್ ಸ್ಮಾರಕದಲ್ಲಿ ರಾಷ್ಟ್ರ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಟ್ವೀಟ್ನಲ್ಲಿ ಏನಿದೆ?: ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ಗೌರವಾನ್ವಿತ ಅಟಲ್ ಜಿ ಅವರ ಜನ್ಮದಿನದಂದು ಅವರಿಗೆ ನಮನಗಳು. ಅಟಲ್ ಜಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ದೇಶಕ್ಕೆ ಅವರ ಶ್ರೀಮಂತ ಸೇವೆಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠ ಹಾಗೂ ಅಭಿವೃದ್ಧಿಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಭಿವೃದ್ಧಿ ಉಪಕ್ರಮಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಅಟಲ್ ಜಿ ಅವರು ತಮ್ಮ ಅಚಲವಾದ ತತ್ವಗಳು ಮತ್ತು ಅದ್ಭುತ ಭಕ್ತಿಯಿಂದ ದೇಶದಲ್ಲಿ ಅಂತ್ಯೋದಯ ಮತ್ತು ಉತ್ತಮ ಆಡಳಿತದ ದೃಷ್ಟಿಕೋನವನ್ನು ಸಾಕಾರಗೊಳಿಸುವ ಮೂಲಕ ಭಾರತೀಯ ರಾಜಕೀಯಕ್ಕೆ ಹೊಸ ದಿಕ್ಕನ್ನು ನೀಡಿದರು. ಇಂತಹ ಅದ್ವಿತೀಯ ದೇಶಭಕ್ತ ಗೌರವಾನ್ವಿತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ನಮನಗಳು ಎಂದು ಬರೆದುಕೊಂಡಿದ್ದಾರೆ.
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್ ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ –…
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…