ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ಪುಣ್ಯ ತಿಥಿ ವಾರ್ಷಿಕೋತ್ಸವದ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಾಜಪೇಯಿ ಅವರ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಾಜಪೇಯಿಯವರೊಂದಿಗಿನ ಒಡನಾಟದ ವಿಡಿಯೊವನ್ನು ಮೋದಿ ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರಧಾನಿ ಮೋದಿಯವರ ಧ್ವನಿಯಿದೆ. ”ಈ ದೇಶ ಯಾವತ್ತಿಗೂ ಅಟಲ್ ಜೀಯವರ ತ್ಯಾಗವನ್ನು ಮರೆಯುವುದಿಲ್ಲ, ಅವರ ನಾಯಕತ್ವದಲ್ಲಿ ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಿ ಮೈಲುಗಲ್ಲು ಸ್ಥಾಪಿಸಿತು. ರಾಜಕಾರಣಿಯಾಗಿ, ಸಂಸದರಾಗಿ, ಸಚಿವರಾಗಿ ಅಥವಾ ಪ್ರಧಾನ ಮಂತ್ರಿಯಾಗಿ ಅಟಲ್ ಅವರು ಹಲವು ಪಾತ್ರಗಳನ್ನು ನಿರ್ವಹಿಸಿದ್ದರು. ಅವರ ಜೀವನದ ಬಗ್ಗೆ ಹಲವು ವಿಷಯಗಳನ್ನು ಮಾತನಾಡಬಹುದು. ಅವರ ಭಾಷಣದ ಬಗ್ಗೆ ದೇಶದ ಜನ ಮಾತನಾಡುತ್ತಾರೆ. ಭವಿಷ್ಯದಲ್ಲಿ ಕೆಲವು ತಜ್ಞರು ಅವರ ಭಾಷಣಗಳನ್ನು ವಿಶ್ಲೇಷಿಸುವುದಾದರೆ ಹಲವು ಸಂದರ್ಭಗಳಲ್ಲಿ ಅವರ ಮೌನ ಮಾತಿಗಿಂತ ಹೆಚ್ಚು ಶಕ್ತಿಶಾಲಿಯಾಗಿತ್ತು, ಜನರು ಅವರ ಮೌನದಿಂದ ಸಂದೇಶಗಳನ್ನು ಪಡೆಯುತ್ತಿದ್ದರು. ಸಂಸತ್ತಿನಲ್ಲಿ ಕೆಲವೊಂದು ಸಂದರ್ಭಗಳಲ್ಲಿ ಅವರು ಅಲ್ಪ ಮಾತುಗಳಿಗೆ ಶರಣಾಗುತ್ತಿದ್ದರು. ಇದು ಅವರ ಸೂಕ್ಷ್ಮಮತಿ ಎಂದು ಪ್ರಧಾನಿ ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…