Featured

ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ಪುಣ್ಯ ತಿಥಿ : ‘ಈ ದೇಶ ಯಾವತ್ತಿಗೂ ‘ನಿಮ್ಮ ತ್ಯಾಗವನ್ನು ಮರೆಯುವುದಿಲ್ಲ : ಪ್ರಧಾನಿ ಟ್ವೀಟ್ -Vishwanews24

ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ಪುಣ್ಯ ತಿಥಿ ವಾರ್ಷಿಕೋತ್ಸವದ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಾಜಪೇಯಿ ಅವರ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಾಜಪೇಯಿಯವರೊಂದಿಗಿನ ಒಡನಾಟದ ವಿಡಿಯೊವನ್ನು ಮೋದಿ ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರಧಾನಿ ಮೋದಿಯವರ ಧ್ವನಿಯಿದೆ. ”ಈ ದೇಶ ಯಾವತ್ತಿಗೂ ಅಟಲ್ ಜೀಯವರ ತ್ಯಾಗವನ್ನು ಮರೆಯುವುದಿಲ್ಲ, ಅವರ ನಾಯಕತ್ವದಲ್ಲಿ ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಿ ಮೈಲುಗಲ್ಲು ಸ್ಥಾಪಿಸಿತು. ರಾಜಕಾರಣಿಯಾಗಿ, ಸಂಸದರಾಗಿ, ಸಚಿವರಾಗಿ ಅಥವಾ ಪ್ರಧಾನ ಮಂತ್ರಿಯಾಗಿ ಅಟಲ್ ಅವರು ಹಲವು ಪಾತ್ರಗಳನ್ನು ನಿರ್ವಹಿಸಿದ್ದರು. ಅವರ ಜೀವನದ ಬಗ್ಗೆ ಹಲವು ವಿಷಯಗಳನ್ನು ಮಾತನಾಡಬಹುದು. ಅವರ ಭಾಷಣದ ಬಗ್ಗೆ ದೇಶದ ಜನ ಮಾತನಾಡುತ್ತಾರೆ. ಭವಿಷ್ಯದಲ್ಲಿ ಕೆಲವು ತಜ್ಞರು ಅವರ ಭಾಷಣಗಳನ್ನು ವಿಶ್ಲೇಷಿಸುವುದಾದರೆ ಹಲವು ಸಂದರ್ಭಗಳಲ್ಲಿ ಅವರ ಮೌನ ಮಾತಿಗಿಂತ ಹೆಚ್ಚು ಶಕ್ತಿಶಾಲಿಯಾಗಿತ್ತು, ಜನರು ಅವರ ಮೌನದಿಂದ ಸಂದೇಶಗಳನ್ನು ಪಡೆಯುತ್ತಿದ್ದರು. ಸಂಸತ್ತಿನಲ್ಲಿ ಕೆಲವೊಂದು ಸಂದರ್ಭಗಳಲ್ಲಿ ಅವರು ಅಲ್ಪ ಮಾತುಗಳಿಗೆ ಶರಣಾಗುತ್ತಿದ್ದರು. ಇದು ಅವರ ಸೂಕ್ಷ್ಮಮತಿ ಎಂದು ಪ್ರಧಾನಿ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago