Featured

ಅಟಲ್ ರ ಕನಸಿನ ಯೋಜನೆ, ಉಡುಪಿಯಲ್ಲಿ ಮೋದಿಯವರಿಂದ ನನಸು!!

ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಶಸ್ವಿಯಾಗಿ ನಾಲ್ಕು ವರ್ಷ ಅಧಿಕಾರವನ್ನು ಪೂರೈಸಿ ಐದನೇ ವರ್ಷದತ್ತ ಹೆಜ್ಜೆ ಇಟ್ಟಿದ್ದಾರೆ. ಒಂದರ ಮೇಲೊಂದರಂತೆ ಹಲವು ಯಶಸ್ವಿ ಯೋಜನೆಗಳನ್ನು ತಂದು ಭಾರತೀಯರ ಮನ ಗೆದ್ದಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಮೋದಿಯವರು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಅವರ ಜೊತೆ ನಾವಿದ್ದೇವೆ ಎಂಬುದನ್ನು ಭಾರತೀಯರು ಇಪ್ಪತ್ತಕ್ಕೂ ಅಧಿಕ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರಕಾರವನ್ನು ಅಧಿಕಾರಕ್ಕೆ ತರುವ ಮೂಲಕ ಸಾಬೀತು ಪಡಿಸಿದ್ದಾರೆ. ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಶಿಷ್ಯರಾಗಿ ಅವರದೇ ಹಾದಿಯಲ್ಲಿ ನಡೆಯುತ್ತಿರುವಂತಹ ಪ್ರಧಾನಿ ಮೋದಿ ಇದೀಗ ಅಟಲ್ ಅವರ ಕನಸಿನ ಯೋಜನೆಯೊಂದಕ್ಕೆ ಚಾಲನೆ ನೀಡುತ್ತಿದ್ದಾರೆ!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಮಂತ್ರಿ ಮಂಡಲ ಉಡುಪಿಯ ಪಾದೂರಿನಲ್ಲಿ ಭೂಗತ ತೈಲ ಸಂಗ್ರಹಾಗಾರವನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಿದೆ. ಉಡುಪಿ ಜಿಲ್ಲೆಯ ಪಾದೂರು ಹಾಗೂ ಒಡಿಸ್ಸಾದ ಚಂಡಿಕೋಲ್ ನಲ್ಲಿ ಎರಡು ವ್ಯೂಹಾತ್ಮಕ ಬೃಹತ್ ತೈಲ ಸಂಗ್ರಹಗಾರದ ಸ್ಥಾಪನೆಗೆ ಮೋದಿ ಸರ್ಕಾರ ಮುಂದಾಗಿದೆ. ಈ ಮೂಲಕ ಭಾರತದಲ್ಲಿರುವ ಒಟ್ಟು ತುರ್ತು ತೈಲ ಸಂಗ್ರಹಾಗಾರಗಳ ಸಂಖ್ಯೆ ನಾಲ್ಕಕ್ಕೆ ಏರಲಿದೆ. ಈಗಾಗಲೇ ಮಂಗಳೂರು ಹಾಗೂ ವಿಶಾಖಪಟ್ಟಣಂಗಳಲ್ಲಿ ತುರ್ತು ತೈಲ ಸಂಗ್ರಹಾಗಾರಗಳಿವೆ. ಇದರ ಜೊತೆ ಜೊತೆಗೆ ಈಗ ಉಡುಪಿ ಹಾಗೂ ಒಡಿಸ್ಸಾದಲ್ಲಿ ಮತ್ತೆರಡು ತೈಲ ಸಂಗ್ರಹಾಗಾರಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಸಚಿವ ಸಂಪುಟ ಇತ್ತೀಚೆಗೆ ಅನುಮೋದಿಸಿರುವ ಕರ್ನಾಟಕದ ಪಾದೂರು ಮತ್ತು ಒಡಿಸ್ಸಾದ ಚಂಡಿಕೋಲ್ ತೈಲ ಸಂಗ್ರಹಗಳಲ್ಲಿ ಒಟ್ಟು 69 ಲಕ್ಷ ಮೆಟ್ರಿಕ್ ಟನ್ ತೈಲೋತ್ಪನ್ನ ಸಂಗ್ರಹದ ಗುರಿ ಹೊಂದಲಾಗಿದೆ. ಚಂಡಿಕೋಲ್ ನಲ್ಲಿ ಒಟ್ಟು 40 ಲಕ್ಷ ಮೆಟ್ರಿಕ್ ಟನ್ ಹಾಗೂ ಪಾದೂರಿನಲ್ಲಿ 25 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ತೈಲ ಸಂಗ್ರಹಾಗಾರ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಚಂಡಿಕೋಲ್ ಮತ್ತು ಪಾದೂರಿನ ತೈಲ ಸಂಗ್ರಹಗಾರಗಳು ಬಂಡೆಗಳ ಗುಹೆಯಂತೆ ಭೂಗತವಾಗಿರಲಿದೆ. ಎರಡೂ ಕಡೆಗಳಿಂದ ಒಟ್ಟು 69 ಲಕ್ಷ ಟನ್ ತೈಲ ಸಂಗ್ರಹವಾಗಲಿದ್ದು, ಈ ಮೂಲಕ ತುರ್ತು ಪರಿಸ್ಥಿತಿಯಲ್ಲಿ ವಿದೇಶಗಳಿಂದ ತೈಲ ಪೂರೈಕೆಯಾಗದ ವೇಳೆ ಈ ಭೂಗತ ಕಚ್ಚಾ ತೈಲ ಸಂಗ್ರಹಾಗಾರಗಳಿಂದ ದೇಶದ ತೈಲ ಬೇಡಿಕೆ ಈಡೇರಿಸುವ ಸಾಮರ್ಥ್ಯ 22 ದಿನಗಳವರೆಗೆ ಏರಿಕೆಯಾಗಲಿದೆ. ಒಟ್ಟು 22 ದಿನಗಳ ಕಾಲ ಭಾರತವನ್ನು ತೈಲದ ಸಮಸ್ಯೆಯಿಂದ ರಕ್ಷಿಸಬಹುದಾಗಿದೆ.

ಅಟಲ್ ರ ಕನಸಿನ ಯೋಜನೆ..

ದಶಕಗಳ ಹಿಂದೆ ಗಲ್ಫ್ ಯುದ್ಧದಲ್ಲಿ ಪಶ್ಚಿಮ ಏಷ್ಯಾಕ್ಕೆ ಹಿನ್ನಡೆಯಾಗಿತ್ತು. ಆಗ ಭಾರತ ಬಹುತೇಕ ದಿವಾಳಿಯಾಗುವ ಹಂತಕ್ಕೆ ಬಂದಿತ್ತು, ತೈಲ ಬೆಲೆ ಗಗನಕ್ಕೇರಿತ್ತು. ಕೇವಲ ಮೂರು ವಾರಗಳ ಆಮದು ಕಾರಣದಿಂದಾಗಿ ವಿದೇಶಿ ವಿನಿಮಯ ಬಿಕ್ಕಟ್ಟು ಪ್ರಾರಂಭವಾಯ್ತು. ಈ ಬಿಕ್ಕಟ್ಟು ಪರಿಹಾರಕ್ಕಾಗಿ ಭಾರತ ಆರ್ಥಿಕ ನೀತಿಯನ್ನು ಜಾರಿಗೊಳಿಸಿತ್ತು. ಅದೇ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ. ಆದಾಗ್ಯೂ ತೈಲ ಬೆಲೆ ಏರಿಕೆ ಭಾರತದ ಮೇಲೆ ನಿರಂತರ ವ್ಯತಿರಿಕ್ತ ಪರಿಣಾಮ ಬೀರುತ್ತಿತ್ತು. ಇದಕ್ಕೆ ದೀರ್ಘಕಾಲಿಕ ಪರಿಹಾರವಾಗಿ 1998ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ ತೈಲ ಸಂಗ್ರಹಾಗಾರಗಳ ನಿರ್ಮಾಣದ ಹೊಸ ಪರಿಕಲ್ಪನೆಯನ್ನು ದೇಶದ ಮುಂದಿಟ್ಟಿತ್ತು. ಸದ್ಯ ಪಾದೂರಿನಲ್ಲಿ ನಿರ್ಮಾಣವಾಗುತ್ತಿರುವ ತೈಲ ಸಂಗ್ರಹಾಗಾರ ಕರ್ನಾಟಕದ ಅತಿ ದೊಡ್ಡ ಸಂಗ್ರಹಾಗಾರವಾಗಲಿದ್ದು, ಈಗಾಗಲೇ ಕಾಮಗಾರಿಗಳು ಆರಂಭವಾಗಿವೆ.

 

 

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago