ಅಡಿಕೆ ಕದ್ದ ಆರೋಪ ; ಬಾಲಕನಿಗೆ ಮಾರಣಾಂತಿಕ ಹಲ್ಲೆ: 10 ಜನರ ವಿರುದ್ಧ ಪ್ರಕರಣ ದಾಖಲು – Vishwanews24

Featured, ದಕ್ಷಿಣ ಕನ್ನಡ

ಅಡಿಕೆ ಕದ್ದ ಆರೋಪ ; ಬಾಲಕನಿಗೆ ಮಾರಣಾಂತಿಕ ಹಲ್ಲೆ: 10 ಜನರ ವಿರುದ್ಧ ಪ್ರಕರಣ ದಾಖಲು – Vishwanews24

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಬಳಿ ಇರುವ ಪುರ್ಲುಮಕ್ಕಿಯಲ್ಲಿ ಅಡಿಕೆ ಕದ್ದ ಆರೋಪದಲ್ಲಿ ಬಾಲಕನೊಬ್ಬನನ್ನು ಮನಬಂದಂತೆ ಥಳಿಸಲಾಗಿತ್ತು. ಬಾಲಕನ ಮೇಲೆ ಸ್ಥಳೀಯರು ಮಾರಣಾಂತಿಕ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾನೆ. ಆತನ ಮೇಲೆ ಹಲ್ಲೆ ನಡೆಸಿದ 10 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಗುತ್ತಿಗಾರ್‌ನ 16 ವರ್ಷದ ಬಾಲಕನ ಮೇಲೆ 10 ಜನರು ಮನಬಂದಂತೆ ಥಳಿಸಿದ್ದಾರೆ. ಬಾಲಕನಿಗೆ ಥಳಿಸಿರುವ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡಲಾಗಿದೆ. ಈ ವೀಡಿಯೋವನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಡಿಕೆ ಕದ್ದಿರುವ ಆರೋಪದಲ್ಲಿ ಬಾಲಕನಿಗೆ ಥಳಿಸಲಾಗಿದೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಗುತ್ತಿಗಾರ್ ಸುತ್ತಮುತ್ತಲಿನ ಮನೆಗಳಲ್ಲಿ ವಾಸಿಸುವ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್​ಚಂದ್ರ ಮತ್ತು ಚೇತನ್ ಗುತ್ತಿಗಾರ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಬ್ರಹ್ಮಾವರ : ಭತ್ತ ಬಡಿಯುವ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರಿಂದ ಪ್ರತಿಭಟನೆ – Vishwanews24