ಬೆಂಗಳೂರು : ಎಲೆಚುಕ್ಕೆ ರೋಗದ ಆತಂಕದಲ್ಲಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು 351 ರೂ ಗೆ ಹೆಚ್ಚಳ ಮಾಡಿದೆ.
ಸದ್ಯ, ಅಡಿಕೆ ಮೇಲಿನ ಕನಿಷ್ಟ ಆಮದು ಬೆಲೆಯು 251 ರೂಗಳಾಗಿತ್ತು.
ಇದೀಗ 100 ರೂ. ಏರಿಕೆ ಮಾಡಲಾಗಿದೆ. ಅಲ್ಲದೇ ಸುಪಾರಿ ಹೆಸರಿನಲ್ಲಿ ಆಮದು ಮಾಡಿಕೊಳ್ಳುವ ಅಡಿಕೆಯ ಆಮದು ಬೆಲೆಯೂ ಹೆಚ್ಚಿದೆ.
ಹೊರ ದೇಶಗಳಿಂದ ಆಗುತ್ತಿದ್ದ ಆಮದು ದರವನ್ನು ₹100 ಹೆಚ್ಚಿಸಿದೆ. ಈವರೆಗೆ ಕನಿಷ್ಠ ಆಮದು ದರ ₹251 ಇದ್ದರೆ ಇನ್ನು ಮುಂದೆ ₹351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡುವ ಮೂಲಕ ಆಮದು ಮಾಡಿಕೊಳ್ಳಬೇಕಿದೆ. ಈ ಬಗ್ಗೆ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಟ್ವಿಟ್ ಮಾಡಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ, ಟ್ವಿಟ್ ಮಾಡಿದ್ದಾರೆ. ಇದೇ ವೇಳೆ ಅವರು ಅಡಿಕೆ ಬೆಳೆಗಾರರ ಹಿತ ಕಾಯುವ ಕೇಂದ್ರದ ಈ ನಿರ್ಧಾರಕ್ಕಾಗಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರಿಗೆ ಹೃತ್ಪೂರ್ವಕವಾದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಅಂಥ ತಿಳಿಸಿದ್ದಾರೆ.
ಹಿಂದಿನ ₹251 ಕನಿಷ್ಠ ಆಮದು ದರವನ್ನು ₹100 ಗಳಿಂದ, ₹351ಕ್ಕೆ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರೂ ₹351 ಕ್ಕಿಂತ ಹೆಚ್ಚಿನ ಬೆಲೆ ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ. ಹೊರದೇಶದಿಂದ ಕಡಿಮೆ ಬೆಲೆಗೆ ಆಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರಿಗೆ ಶಾಪವಾಗಿ ಪರಿಣಾಮಿಸಿತ್ತು.
ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ…
ಶ್ರೀನಗರ : ಪಾರ್ಕಿಂಗ್ ಮಾಡುವ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ; ತಪ್ಪಿದ ಭಾರೀ ಅವಘಡ ಶ್ರೀನಗರ: ನವಿ…
ಪಣಂಬೂರು: ಖಾಸಗಿ ಎಕ್ಸ್ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್ಪ್ರೆಸ್…
ವಿಜಯ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ ಬೆಂಗಳೂರು: ನಟ ದುನಿಯಾ…
ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ…
ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…