ಬೆಂಗಳೂರು : ಎಲೆಚುಕ್ಕೆ ರೋಗದ ಆತಂಕದಲ್ಲಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು 351 ರೂ ಗೆ ಹೆಚ್ಚಳ ಮಾಡಿದೆ.
ಸದ್ಯ, ಅಡಿಕೆ ಮೇಲಿನ ಕನಿಷ್ಟ ಆಮದು ಬೆಲೆಯು 251 ರೂಗಳಾಗಿತ್ತು.
ಇದೀಗ 100 ರೂ. ಏರಿಕೆ ಮಾಡಲಾಗಿದೆ. ಅಲ್ಲದೇ ಸುಪಾರಿ ಹೆಸರಿನಲ್ಲಿ ಆಮದು ಮಾಡಿಕೊಳ್ಳುವ ಅಡಿಕೆಯ ಆಮದು ಬೆಲೆಯೂ ಹೆಚ್ಚಿದೆ.
ಹೊರ ದೇಶಗಳಿಂದ ಆಗುತ್ತಿದ್ದ ಆಮದು ದರವನ್ನು ₹100 ಹೆಚ್ಚಿಸಿದೆ. ಈವರೆಗೆ ಕನಿಷ್ಠ ಆಮದು ದರ ₹251 ಇದ್ದರೆ ಇನ್ನು ಮುಂದೆ ₹351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡುವ ಮೂಲಕ ಆಮದು ಮಾಡಿಕೊಳ್ಳಬೇಕಿದೆ. ಈ ಬಗ್ಗೆ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಟ್ವಿಟ್ ಮಾಡಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ, ಟ್ವಿಟ್ ಮಾಡಿದ್ದಾರೆ. ಇದೇ ವೇಳೆ ಅವರು ಅಡಿಕೆ ಬೆಳೆಗಾರರ ಹಿತ ಕಾಯುವ ಕೇಂದ್ರದ ಈ ನಿರ್ಧಾರಕ್ಕಾಗಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರಿಗೆ ಹೃತ್ಪೂರ್ವಕವಾದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಅಂಥ ತಿಳಿಸಿದ್ದಾರೆ.
ಹಿಂದಿನ ₹251 ಕನಿಷ್ಠ ಆಮದು ದರವನ್ನು ₹100 ಗಳಿಂದ, ₹351ಕ್ಕೆ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರೂ ₹351 ಕ್ಕಿಂತ ಹೆಚ್ಚಿನ ಬೆಲೆ ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ. ಹೊರದೇಶದಿಂದ ಕಡಿಮೆ ಬೆಲೆಗೆ ಆಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರಿಗೆ ಶಾಪವಾಗಿ ಪರಿಣಾಮಿಸಿತ್ತು.
ಡಿವೈಡರ್ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು ಬೆಂಗಳೂರು: ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ…
ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ.. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು…
ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಮಾತ್ರ: ಡೀಸೆಲ್ ಮಾರಾಟ ಮಿತಿಗೊಳಿಸಿದ ಕೇಂದ್ರ ನವದೆಹಲಿ: ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ…
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭ ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ)…
ಉಡುಪಿ ಶ್ರೀ ಕೃಷ್ಣ ಮಠ ಹಾಗೂ ಕಾಪು ಶ್ರೀ ಹೊಸ ಮಾರಿಗುಡಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಉಡುಪಿ:…
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…