Featured

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

ಬೆಂಗಳೂರು : ಗಲ್ಫ್ ಪ್ರದೇಶದ ಯುದ್ಧ ಪರಿಣಾಮ ದೇಶದಾದ್ಯಂತ ಕಂಡುಬರುತ್ತಿದ್ದು, ಕರುನಾಡಲ್ಲೂ ಅಡುಗೆ ಅನಿಲದ ಅಭಾವ ಗಂಭೀರವಾಗುತ್ತಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಹೋಟೆಲ್‌ಗಳು, ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಜನರು ಖಾಲಿ ಸಿಲಿಂಡರ್ ಹಿಡಿದು ಅನಿಲ ಏಜೆನ್ಸಿಗಳತ್ತ ಧಾವಿಸುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ಈ ಪರಿಸ್ಥಿತಿಯಲ್ಲಿ ಮಾತನಾಡಿದ ಆಹಾರ ಸಚಿವ ಕೆ. ಎಚ್. ಮುನಿಯಪ್ಪ, ಸಿಲಿಂಡರ್ ಕೊರತೆಯ ಹಿನ್ನೆಲೆ ಗ್ರಾಮೀಣ ಪ್ರದೇಶದ ಜನರು ತಾತ್ಕಾಲಿಕವಾಗಿ ಸೌದೆ ಒಲೆಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರಿನಿಂದ ಸುಮಾರು 40 ಕಿಮೀ ದೂರ ಹೋದರೆ ಸೌದೆ ಲಭ್ಯವಿದ್ದು, ಅರಣ್ಯ ಪ್ರದೇಶದ ಹಸಿ ಮರಗಳನ್ನು ಕಡಿದು ಬಳಸಬಾರದು, ಬದಲಿಗೆ ಒಣ ಕಟ್ಟಿಗೆಗಳನ್ನು ಮಾತ್ರ ಬಳಸಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಉಂಟಾದ ಸಿಲಿಂಡರ್ ಕೊರತೆಗೆ ಕೇಂದ್ರ ಸರ್ಕಾರವೇ ಕಾರಣವೆಂದು ಆರೋಪಿಸಿದ ಅವರು, ಡಿಸ್ಟ್ರಿಬ್ಯೂಟರ್‌ಗಳ ವಿರುದ್ಧ ದೂರುಗಳು ಬರುತ್ತಿವೆ ಎಂದರು. ಗೃಹ ಬಳಕೆಯ ಸಿಲಿಂಡರ್‌ಗಳ ಪೂರೈಕೆ ಹಿಂದಿನಂತೆ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ಆಯಿಲ್ ಕಂಪನಿಗಳಿಗೆ ಅಗತ್ಯ ಸೂಚನೆ ನೀಡಲಾಗಿದ್ದು, ಗ್ರಾಹಕರ ಮನೆ ಬಾಗಿಲಿಗೆ ಸಕಾಲದಲ್ಲಿ ಸಿಲಿಂಡರ್ ತಲುಪಿಸಬೇಕು ಎಂದು ತಿಳಿಸಿದ್ದಾರೆ. ಪ್ರಸ್ತುತ ರಾಜ್ಯಕ್ಕೆ ಸುಮಾರು 40% ಸಿಲಿಂಡರ್ ಪೂರೈಕೆ ಆಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:

ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ವಿತರಣೆಯನ್ನು ಹೆಚ್ಚಿಸಲಾಗಿದ್ದು, ಪೂರೈಕೆಯನ್ನು 68%ಕ್ಕೆ ಏರಿಸಲಾಗಿದೆ. ಶಿಕ್ಷಣ ಸಂಸ್ಥೆಗಳು, ವಸತಿ ನಿಲಯಗಳು, ಆಸ್ಪತ್ರೆಗಳು ಸೇರಿದಂತೆ ಅಗತ್ಯ ಸೇವೆಗಳಿಗಾಗಿ ಸಾವಿರಾರು ಸಿಲಿಂಡರ್‌ಗಳನ್ನು ಹಂಚಿಕೆ ಮಾಡಲಾಗಿದೆ. ಹೋಟೆಲ್, ಡಾಬಾ, ರೆಸ್ಟೋರೆಂಟ್, ಕ್ಯಾಂಟೀನ್, ಬೇಕರಿ ಹಾಗೂ ಇತರೆ ವಾಣಿಜ್ಯ ಬಳಕೆಗಳಿಗೆ ದೊಡ್ಡ ಪ್ರಮಾಣದಲ್ಲಿ ಸಿಲಿಂಡರ್ ವಿತರಣೆ ನಡೆಯುತ್ತಿದೆ.

ಇದೇ ವೇಳೆ, ಹೆಚ್ಚುವರಿ ದರಕ್ಕೆ ಸಿಲಿಂಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ವಸೂಲಿ ಮಾಡಿದರೆ ಪರವಾನಗಿ ರದ್ದು ಮಾಡುವುದಾಗಿ ತಿಳಿಸಿದ್ದಾರೆ. ಈಗಾಗಲೇ ಅನಧಿಕೃತ ದಾಸ್ತಾನು ಪ್ರಕರಣಗಳಲ್ಲಿ 1169 ಕೇಸ್ ದಾಖಲಾಗಿದ್ದು, 1603 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಗ್ಯಾಸ್ ಅಭಾವದ ನಡುವೆ ಜನರು ಪರ್ಯಾಯ ಮಾರ್ಗಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಪೂರೈಕೆ ಸುಧಾರಿಸಲು ಕ್ರಮ ಕೈಗೊಳ್ಳುತ್ತಿದೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago