Featured

ಅಡ್ಡರಸ್ತೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಮುಸಲ್ಮಾನರ ಹೆಸರನ್ನು ನಾಮಕರಣ ಮಾಡಬಾರದು : ಅನಂತಕುಮಾರ ಹೆಗಡೆ -Vishwanews24

ಅಡ್ಡರಸ್ತೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಮುಸಲ್ಮಾನರ ಹೆಸರನ್ನು ನಾಮಕರಣ ಮಾಡಬಾರದು : ಅನಂತಕುಮಾರ ಹೆಗಡೆ -Vishwanews24

ಬೆಂಗಳೂರು,: ”ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರು ಇಟ್ಟರೆ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ” ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ.

ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನು ಇಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀರ್ಮಾನಕ್ಕೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಈ ಸಂಬಂಧ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

”ಈ ವಾರ್ಡ್‌ನಲ್ಲಿ ಕೇವಲ ಮುಸಲ್ಮಾನರ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಲಾಗಿದೆ. ಸಮಾಜ ಸೇವಕರ ಹೆಸರಿನಲ್ಲಿ ಕೋಮು ವೈಭವೀಕರಣ ಮಾಡುವುದು ಸರಿಯಲ್ಲ. ಬೃಹತ್‌ ಬೆಂಗಳೂರು ಮಹಾರನಗರ ಪಾಲಿಕೆಯ ಈ ನಿರ್ಧಾರದಿಂದ ಸಮಾಜದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ” ಎಂದು ಹೇಳಿದ್ದಾರೆ.

”ಬಿಬಿಎಂಪಿಯಂತೆ ಬಹುಸಂಖ್ಯಾತ ಹಿಂದುಗಳ ಬಾಹುಳ್ಯವಿರುವ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯತ್‌ಗಳು ಇದೇ ನಿರ್ಧಾರವನ್ನು ತೆಗೆದುಕೊಂಡರೆ ಪರಿಸ್ಥಿತಿ ಊಹಿಸಲೂ ಸಾಧ್ಯವಿಲ್ಲ. ಇಂದು ಕೋಮಿನ ತುಷ್ಟೀಕರಣಕ್ಕಾಗಿ ಬಿಬಿಎಂಪಿ ಈ ರೀತಿ ನಿರ್ಣಯ ತೆಗೆದುಕೊಳ್ಳುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ ಎಂದು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

”ಹಾಗೇನಾದರೂ ಈ ರಸ್ತೆಗಳಿಗೆ ಹೆಸರನ್ನು ಇಡಕೇಬೇಕಾದ ಅನಿವಾರ್ಯತೆ ಇದ್ದರೆ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ವೀರ ಯೋಧರ, ರಾಷ್ಟ್ರ ಕಂಡ ಮಹಾನ್‌ ವ್ಯಕ್ತಿಗಳ, ದೇಶಕ್ಕಾಗಿ ಹೋರಾಡಿದ ವೀರ ಸೈನಿಕರ ಹೆಸರನ್ನು ಇಟ್ಟಲ್ಲಿ ಪಾದರಾಯಣಪುರ ಹೆಸರಿಗೂ ಗೌರವ ದೊರಲುವಂತಾಗುತ್ತದೆ” ಎಂದಿದ್ದಾರೆ.

”ಬಿಬಿಎಂಪಿಯ ಪಾದರಾಯಣಪುರದ ಅಡ್ಡರಸ್ತೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಮುಸಲ್ಮಾನರ ಹೆಸರನ್ನು ನಾಮಕರಣ ಮಾಡಬಾರದು” ಎಂದು ಆಗ್ರಹಿಸಿದ್ದಾರೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago