ಅಣ್ಣನನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ : ಡಿ.ಕೆ. ಸುರೇಶ್ – vishwanews24
ಅಣ್ಣನನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ : ಡಿ.ಕೆ. ಸುರೇಶ್
ಬೆಂಗಳೂರು : ರಾಹುಲ್ ಗಾಂಧಿಯವರ ರಾಜ್ಯಕ್ಕೆ ಆಗಮನ ವಿಚಾರ ಗೊತ್ತಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಗಮನ ಹರಿಸ್ತಾರೆ. ಕಾಂಗ್ರೆಸ್ ಭನವಗಳ ಬಗ್ಗೆ ಪಕ್ಷದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮಾಹಿತಿ ನೀಡ್ತಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.
ನಂತರ ಮಾತನಾಡಿದ ಅವರು, ನವೆಂಬರ್ 15ರ ಕ್ರಾಂತಿಯ ಬಗ್ಗೆ ಮಾಹಿತಿ ಇಲ್ಲ. ನವೆಂಬರ್ ಅಂದ್ರೆ ನನಗೆ ನೆನಪಾಗೋದು ಕನ್ನಡ ರಾಜ್ಯೋತ್ಸವ, ಅದ್ದೂರಿಯಾಗಿ ಮಾಡೋಣ. ಅಣ್ಣನನ್ನ ಸಿಎಂ ಮಾಡಬೇಕೆಂಬ ಆಸೆ ನನಗೂ ಇದೆ, ಅವರ ಹಣೆಯಲ್ಲಿ ಬರೆದಿದ್ರೆ ಸಿಎಂ ಆಗ್ತಾರೆ ಎಂದರು.
ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸುವ ಆದೇಶಕ್ಕೆ ಹೈಕೋರ್ಟ್ ತಡೆ – vishwanews24
95-98 ವಯಸ್ಸು ಆಗಿರುವವರೂ ಇನ್ನೂ ರಾಜಕೀಯದಲ್ಲಿ ಇದ್ದಾರೆ. ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿದ್ರೆ ಒಳ್ಳೆಯದು. ರಾಜಣ್ಣ ಹಿರಿಯರಿದ್ದಾರೆ ಅವರ ಸಲಹೆ, ಅಭಿಪ್ರಾಯಗಳನ್ನು ವರಿಷ್ಠರಿಗೆ ತಿಳಿಸ್ತಾರೆ ಸ್ವಾಗತ. ಕಾಂಗ್ರೆಸ್ ಸರ್ಕಾರ 5 ವರ್ಷ ಇರಲಿ ಎಂದು ಜನತೆ 137 ಸ್ಥಾನ ನೀಡಿದ್ದಾರೆ ಎಂದರು. ಸದ್ಯದ ವಿದ್ಯಮಾನಗಳಿಂದ ಆಡಳಿತದ ಮೇಲೆ ಪರಿಣಾಮ ವಿಚಾರವಾಗಿ, ನನಗೆ ಆಡಳಿತ ಮಾಡಿ ಅನುಭವ ಇಲ್ಲ. ಎಲ್ಲಾ ಸಂದರ್ಭದಲ್ಲಿ ಎಲ್ಲರನ್ನೂ ಸಂತೋಷ ಪಡಿಸಲು ಆಗಲ್ಲ. ನಾನು ಯಾವಾಗಲೂ ಎಣ್ಣಿ ಮೈಗೂ ಹಚ್ಚಿಕೊಳಲ್ಲ, ಮೈಗೂ ಹಾಕೊಳಲ್ಲ ಎಂದು ತಿಳಿಸಿದರು.
