Categories: ಉಡುಪಿ

ಅಣ್ಣಾಮಲೈ ಬಿಜೆಪಿ ಸೇರ್ಪಡೆ : ಕರ್ನಾಟಕ ಬಿಜೆಪಿ ಮುಖಂಡರ ಸಂತಸ ಹಾಗೂ ಶುಭ ಹಾರೈಕೆ -Vishwanews24

ಅಣ್ಣಾಮಲೈ ಬಿಜೆಪಿ ಸೇರ್ಪಡೆ : ಕರ್ನಾಟಕ ಬಿಜೆಪಿ ಮುಖಂಡರ ಸಂತಸ ಹಾಗೂ ಶುಭ ಹಾರೈಕೆ -Vishwanews24

ಬೆಂಗಳೂರು : ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಮಾಜಿ ಅಧಿಕಾರಿ ಅಣ್ಣಾಮಲೈ ಅವರು ಇಂದು ದೆಹಲಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದು ಕರ್ನಾಟಕ ಬಿಜೆಪಿ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ.

ಅಣ್ಣಾಮಲೈ ಬಿಜೆಪಿ ಗೆಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಹರ್ಷ ವ್ಯಕ್ತಪಡಿಸಿರುವ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವಎಸ್ ಸುರೇಶ್‌ ಕುಮಾರ್‌ ಅವರು, ”ಪೋಲಿಸ್ ಇಲಾಖೆಯಲ್ಲಿದ್ದಾಗ ತಮ್ಮ ದಕ್ಷತೆಗೆ, ಕಾರ್ಯತತ್ಪರತೆಗೆ ಹೆಸರಾಗಿದ್ದ ಶ್ರೀ ಅಣ್ಣಾಮಲೈ ರವರು ಇಂದು ಬಿಜೆಪಿಗೆ ಸೇರುತ್ತಿರುವ ವಿಷಯ ಅತ್ಯಂತ ಸಂತಸ ತಂದಿದೆ” ಎಂದು ಹೇಳಿದ್ದಾರೆ.

ಇನ್ನು ಅಣ್ಣಾಮಲೈ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಅವರು, ”ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ. ಅವರಿಗೆ ಹೃದಯಪೂರ್ವಕ ಸ್ವಾಗತ” ಎಂದಿದ್ದಾರೆ.

ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮತ್ತು ಜನಪ್ರಿಯವಾಗಿ ‘ಸಿಂಗಂ’ ಎಂದು ಕರೆಯಲ್ಪಡುವ ಅಣ್ಣಾಮಲೈ ಅವರು 2019 ರ ಮೇ ತಿಂಗಳಲ್ಲಿ ರಾಜೀನಾಮೆ ನೀಡಿದ್ದರು. ಬಳಿಕ ಬಿಜೆಪಿಗೆ ಸೇರುವ ಅಭಿಲಾಷೆ ವ್ಯಕ್ತಪಡಿಸಿದ್ದರು. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿ.ಟಿ.ರವಿ, ‘ಕರ್ನಾಟಕ ಪೊಲೀಸ್ ಇಲಾಖೆಯ ರಿಯಲ್ ‘ಸಿಂಗಂ’ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರಲಿದ್ದಾರೆ. ತಮ್ಮ ದಕ್ಷ ಕಾರ್ಯವೈಖರಿಯಿಂದ ನಾಡಿನಾದ್ಯಂತ ಹೆಸರುವಾಸಿಯಾದ ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ಅತೀವ ಸಂತಸ ತಂದಿದೆ. ನಿಮಗೆ ಹೃದಯಪೂರ್ವಕ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

7 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

7 hours ago