ಬಳ್ಳಾರಿ : ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ಯಾರಿಗೂ ಅಸಮಾಧಾನವಿಲ್ಲ. ನಾನು ಶ್ರೀರಾಮುಲು ಜತೆ ಮಾತಾಡಿದ್ದೇನೆ. ಅವರು ಸಂತೋಷವಾಗಿ ಬಳ್ಳಾರಿಗೆ ಆಹ್ವಾನ ನೀಡಿದ್ದಾರೆ. ಅಣ್ಣ ರಾಮುಲು ಇರುವ ಕಡೆ ತಮ್ಮ ಲಕ್ಷ್ಮಣನಿಗೆ ಯಾವ ತೊಂದರೆ ಇಲ್ಲ. ನಮ್ಮೆಲ್ಲರ ಉದ್ದೇಶ ಇಡೀ ರಾಜ್ಯದ ಅಭಿವೃದ್ಧಿ. ಎಲ್ಲರ ಸಹಕಾರದೊಂದಿಗೆ ಬಳ್ಳಾರಿ ಮಾದರಿ ಜಿಲ್ಲೆಯಾಗಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಬಳ್ಳಾರಿಯಲ್ಲಿಂದು ಕಲ್ಯಾಣ ಕರ್ನಾಟಕ ಧ್ವಜಾರೋಣ ಕಾರ್ಯಕ್ರಮವನ್ನು ಬಳ್ಳಾರಿಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೆರವೇರಿಸಿದರೇ, ಯಾದಗಿರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೆರವೇರಿಸಿದ್ದಾರೆ. ಇದೇ ವಿಚಾರವಾಗಿ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನ ಕೈ ತಪ್ಪಿದ್ದಕ್ಕಾಗಿ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿತ್ತು.
ಈ ಕುರಿತಂತೆ ಸ್ಪಷ್ಟ ಪಡಿಸಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಶ್ರೀರಾಮುಲು ನಾನು ಅಣ್ಣ ತಮ್ಮಂದಿರಿದ್ದಂತೆ. ನಮ್ಮ ನಡುವೆ ಯಾವುದೇ ಮನಸ್ಥಾಪವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೈ ತಪ್ಪಿದ್ದಕ್ಕಾಗಿ ಶ್ರೀರಾಮುಲು ಅವರಿಗೆ ಬೇಸರವೂ ಇಲ್ಲ. ನಮ್ಮ ಉದ್ದೇಶ ರಾಜ್ಯದ ಅಭಿವೃದ್ಧಿ. ಜಿಲ್ಲೆಯನ್ನು ಎಲ್ಲರ ಸಹಕಾರದೊಂದಿಗೆ ಮಾದರಿ ಜಿಲ್ಲೆಯಾಗಿ ಮಾಡಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…