ಬೆಂಗಳೂರು: ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ. ಆದರೆ ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಹೈಕಮಾಂಡ್ ಭೇಟಿ ಯಾವುದು ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲ್ಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ ಪಾರ್ಟಿ ಅವರನ್ನ ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದಿದ್ದಾರೆ.
ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ, ಸ್ಥಾನ ಬೇಕು ಅಂತ ಎಂದು ಚೇರ್ನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡ ಇಲ್ಲ. ಬೇರೆ ಯಾವುದೇ ಚಿಂತನೆಗಳೂ ಇಲ್ಲ. ಹಕ್ಕು ಅನ್ನೋ ಪ್ರಶ್ನೆ ಇಲ್ಲ ಎಂದು ನುಡಿದ್ದಾರೆ.
ಡಿ.ಕೆ.ಶಿವಕುಮಾರ್ ಹಿಂದೆ ಪ್ರಧಾನಿ ಭೇಟಿ ಆಗುವುದು ಹೈಕಮಾಂಡ್ ಗಮನಕ್ಕೆ ತಂದಿದ್ದರು. ಶಿವರಾತ್ರಿ ಹಬ್ಬದಲ್ಲಿ ಅಮಿತ್ ಶಾ ಭೇಟಿಯೂ ಹೈಕಮಾಂಡ್ ಗಮನಕ್ಕೆ ತಂದಿದ್ದರು ಎಂದು ಹೇಳಿದ್ದಾರೆ.
ಕೇಂದ್ರದ ತೆರಿಗೆ ಕಡಿತ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಷಯ ಅಲ್ಲಲ್ಲಿ ಚರ್ಚೆ ಆಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯಗಳಿಗೆ ಶಕ್ತಿ ತುಂಬುವುದು ಬಿಟ್ಟು ಬಲವಂತವಾದ ಕಾನೂನು ಹೇರಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯಗಳ ಅಭಿವೃದ್ಧಿ ಕುಂಠಿತಕ್ಕೆ ಕೇಂದ್ರ ಸರ್ಕಾರ ಯಾವ ರೀತಿ ಕಾರಣ ಆಗುತ್ತಿದೆ ನಾವು ನೋಡ್ತಾ ಇದ್ದೇವೆ. ರಾಷ್ಟ್ರ ಹಾಗೂ ರಾಜ್ಯದ ಜನರು ತಿರುಗಿ ಬೀಳಬಹುದು. ತೆರಿಗೆ ಹಣ ಕೊಡಿ ಎಂದು ನಾನು ಮನವಿ ಮಾಡ್ತೇನೆ. ಜನಸಂಖ್ಯೆ ಆಧಾರದ ಮೇಲೆ ತೆರಿಗೆ ಹಣ ವಿಭಜನೆ ಆಗುತ್ತಿದೆ. ಮಹಿಳಾ ಮೀಸಲಾತಿ ಅನುಮೋದನೆ ಆಗಿದೆ. ಜಾತಿಗಣತಿ ಆಗುವ ಸಾಧ್ಯತೆ ಇದೆ. ಕ್ಷೇತ್ರಗಳನ್ನ ಜಾಸ್ತಿ ಮಾಡಿದರೆ, ಸಂಪೂರ್ಣವಾಗಿ ಉತ್ತರ ಭಾರತದ ಹಿಡಿತಕ್ಕೆ ಹೋಗುತ್ತದೆ. ಬಿಜೆಪಿ ನಾಯಕರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…