Featured

ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ ,ಅದಕ್ಕೆ ಕಾಲ ಕೂಡಿ ಬರಬೇಕು : ಡಿ.ಕೆ ಸುರೇಶ್ – vishwanews24

ಸಿಎಂ ಸ್ಥಾನ ಬೇಕು ಅಂತ  ಸಿದ್ದರಾಮಯ್ಯರನ್ನಚೇರ್‌ನಿಂದ ಎಳೆದು ಕೂರಿಸೋಕೆ ಆಗುತ್ತಾ? : ಡಿ.ಕೆ ಸುರೇಶ್

ಬೆಂಗಳೂರು: ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ. ಆದರೆ ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್  ಹೇಳಿದ್ದಾರೆ.

ಬೆಂಗಳೂರಿನಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಹೈಕಮಾಂಡ್ ಭೇಟಿ ಯಾವುದು ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲ್ಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ ಪಾರ್ಟಿ ಅವರನ್ನ ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದಿದ್ದಾರೆ.

ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ, ಸ್ಥಾನ ಬೇಕು ಅಂತ ಎಂದು ಚೇರ್‌ನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡ ಇಲ್ಲ. ಬೇರೆ ಯಾವುದೇ ಚಿಂತನೆಗಳೂ ಇಲ್ಲ. ಹಕ್ಕು ಅನ್ನೋ ಪ್ರಶ್ನೆ ಇಲ್ಲ ಎಂದು ನುಡಿದ್ದಾರೆ.

ಡಿ.ಕೆ.ಶಿವಕುಮಾರ್ ಹಿಂದೆ ಪ್ರಧಾನಿ ಭೇಟಿ ಆಗುವುದು ಹೈಕಮಾಂಡ್ ಗಮನಕ್ಕೆ ತಂದಿದ್ದರು. ಶಿವರಾತ್ರಿ ಹಬ್ಬದಲ್ಲಿ ಅಮಿತ್ ಶಾ ಭೇಟಿಯೂ ಹೈಕಮಾಂಡ್ ಗಮನಕ್ಕೆ ತಂದಿದ್ದರು ಎಂದು ಹೇಳಿದ್ದಾರೆ.

ಕೇಂದ್ರದ ತೆರಿಗೆ ಕಡಿತ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಷಯ ಅಲ್ಲಲ್ಲಿ ಚರ್ಚೆ ಆಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯಗಳಿಗೆ ಶಕ್ತಿ ತುಂಬುವುದು ಬಿಟ್ಟು ಬಲವಂತವಾದ ಕಾನೂನು ಹೇರಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯಗಳ ಅಭಿವೃದ್ಧಿ ಕುಂಠಿತಕ್ಕೆ ಕೇಂದ್ರ ಸರ್ಕಾರ ಯಾವ ರೀತಿ ಕಾರಣ ಆಗುತ್ತಿದೆ ನಾವು ನೋಡ್ತಾ ಇದ್ದೇವೆ. ರಾಷ್ಟ್ರ ಹಾಗೂ ರಾಜ್ಯದ ಜನರು ತಿರುಗಿ ಬೀಳಬಹುದು. ತೆರಿಗೆ ಹಣ ಕೊಡಿ ಎಂದು ನಾನು ಮನವಿ ಮಾಡ್ತೇನೆ. ಜನಸಂಖ್ಯೆ ಆಧಾರದ ಮೇಲೆ ತೆರಿಗೆ ಹಣ ವಿಭಜನೆ ಆಗುತ್ತಿದೆ. ಮಹಿಳಾ ಮೀಸಲಾತಿ ಅನುಮೋದನೆ ಆಗಿದೆ. ಜಾತಿಗಣತಿ ಆಗುವ ಸಾಧ್ಯತೆ ಇದೆ. ಕ್ಷೇತ್ರಗಳನ್ನ ಜಾಸ್ತಿ ಮಾಡಿದರೆ, ಸಂಪೂರ್ಣವಾಗಿ ಉತ್ತರ ಭಾರತದ ಹಿಡಿತಕ್ಕೆ ಹೋಗುತ್ತದೆ. ಬಿಜೆಪಿ ನಾಯಕರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

Vishwa News 24

Recent Posts

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

5 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago