Featured

ಅತಿವೃಷ್ಟಿ: ಹೆಚ್ಚಿನ ಪರಿಹಾರ ಬಿಡುಗಡೆಗೆ ಮನವಿ ಮಾಡಲು ಮುಂದಿನ ವಾರ ದೆಹಲಿಗೆ ಸಿ.ಎಂ -Vishwanews24

ಅತಿವೃಷ್ಟಿ: ಹೆಚ್ಚಿನ ಪರಿಹಾರ ಬಿಡುಗಡೆಗೆ ಮನವಿ ಮಾಡಲು ಮುಂದಿನ ವಾರ ದೆಹಲಿಗೆ ಸಿ.ಎಂ -Vishwanews24

ಬೆಳಗಾವಿ:  ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಈ ಸಂಬಂಧ ಶೀಘ್ರದಲ್ಲೇ ಎಲ್ಲ ಶಾಸಕರ ಸಭೆ ಕರೆದು ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19 ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ.  ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.

ಬೆಳಗಾವಿ-ಧಾರವಾಡ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago