Featured

ಅತೃಪ್ತ ಕಾಂಗ್ರೆಸ್ ಮುಖಂಡರು ಬಿ.ಎಸ್​​.ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ – Vishwanews24

ಕೋಲಾರ:ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಅತೃಪ್ತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​​ ಯಡಿಯೂರಪ್ಪನವರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದು, ಕಾಂಗ್ರೆಸ್​​ ಸಂಸದ ಕೆ.ಎಚ್​​​ ಮುನಿಯಪ್ಪನವರಿಗೆ ಭಾರೀ ಹಿನ್ನಡೆಯಾಗಿದೆ. ಅಲ್ಲದೇ ಬಿಜೆಪಿಯೂ ಸ್ಥಳೀಯ ಕಾಂಗ್ರೆಸ್​​ ನಾಯಕರನ್ನು ಸೆಳೆಯಲು ಮುಂದಾಗಿತ್ತು. ಬಿಎಸ್​​ವೈ ನಿರೀಕ್ಷೆಯಂತೆಯೇ ಅತೃಪ್ತ ಕಾಂಗ್ರೆಸ್ ಮುಖಂಡರು ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ​​​​

ಕೆ.ಎಚ್ ಮುನಿಯಪ್ಪ ಅವರ ವಿರುದ್ಧ ಸದಾ ಕತ್ತಿ ಮಸೆಯುತ್ತಿದ್ದ ಕಾಂಗ್ರೆಸ್ಸಿನ ಸ್ಥಳೀಯ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಬಾಜಾಚಿ ಚನ್ನಯ್ಯ ಮತ್ತು ಬಿ.ಪಿ  ಮುನಿವೆಂಕಟಪ್ಪ ಎಂಬುವರು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲೇ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ಧಾರೆ. ಬಿ.ಎಸ್​​​ ಯಡಿಯೂರಪ್ಪನವರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದು, ಸಂಸದ ಮುನಿಯಪ್ಪ ಅವರನ್ನು ಸೋಲಿಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ಧಾರೆ.

ಕಳೆದ 7 ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಸೋಲುಣಿಸಿರುವ ಮುನಿಯಪ್ಪ ಜಿಲ್ಲೆಯನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿಸಿದ್ದಾರೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಸತತ ಸೋಲನುಭವಿಸಿರುವ ಮುನಿಯಪ್ಪ, ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಜಯಗಳಿಸಿಲ್ಲ.

ಕೆಎಚ್ ಮುನಿಯಪ್ಪನವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹೀಗಾಗಿ ಈ ಬಾರಿ ಕಾಂಗ್ರೆಸ್ ಸಂಸದರನ್ನು ಸೋಲಸಬೇಕೆಂಬ ಪಣ ತೊಟ್ಟಿದ್ದೇವೆ. ಈಗಾಗಲೇ ಇದಕ್ಕೆ ಸಿದ್ಧತೆ ನಡೆಸಿಕೊಂಡಿದ್ದೇವೆ ಎಂದು ಬಿಜೆಪಿ ಸೇರಿದ ಕಾಂಗ್ರೆಸ್ ಅತೃಪ್ತ ಮುಖಂಡರು ಹೇಳಿದ್ದಾರೆ.

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago