Featured

ಅತೃಪ್ತ ಕಾಂಗ್ರೆಸ್ ಮುಖಂಡರು ಬಿ.ಎಸ್​​.ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ – Vishwanews24

ಕೋಲಾರ:ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಅತೃಪ್ತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​​ ಯಡಿಯೂರಪ್ಪನವರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದು, ಕಾಂಗ್ರೆಸ್​​ ಸಂಸದ ಕೆ.ಎಚ್​​​ ಮುನಿಯಪ್ಪನವರಿಗೆ ಭಾರೀ ಹಿನ್ನಡೆಯಾಗಿದೆ. ಅಲ್ಲದೇ ಬಿಜೆಪಿಯೂ ಸ್ಥಳೀಯ ಕಾಂಗ್ರೆಸ್​​ ನಾಯಕರನ್ನು ಸೆಳೆಯಲು ಮುಂದಾಗಿತ್ತು. ಬಿಎಸ್​​ವೈ ನಿರೀಕ್ಷೆಯಂತೆಯೇ ಅತೃಪ್ತ ಕಾಂಗ್ರೆಸ್ ಮುಖಂಡರು ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ​​​​

ಕೆ.ಎಚ್ ಮುನಿಯಪ್ಪ ಅವರ ವಿರುದ್ಧ ಸದಾ ಕತ್ತಿ ಮಸೆಯುತ್ತಿದ್ದ ಕಾಂಗ್ರೆಸ್ಸಿನ ಸ್ಥಳೀಯ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಬಾಜಾಚಿ ಚನ್ನಯ್ಯ ಮತ್ತು ಬಿ.ಪಿ  ಮುನಿವೆಂಕಟಪ್ಪ ಎಂಬುವರು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲೇ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ಧಾರೆ. ಬಿ.ಎಸ್​​​ ಯಡಿಯೂರಪ್ಪನವರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದು, ಸಂಸದ ಮುನಿಯಪ್ಪ ಅವರನ್ನು ಸೋಲಿಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ಧಾರೆ.

ಕಳೆದ 7 ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಸೋಲುಣಿಸಿರುವ ಮುನಿಯಪ್ಪ ಜಿಲ್ಲೆಯನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿಸಿದ್ದಾರೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಸತತ ಸೋಲನುಭವಿಸಿರುವ ಮುನಿಯಪ್ಪ, ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಜಯಗಳಿಸಿಲ್ಲ.

ಕೆಎಚ್ ಮುನಿಯಪ್ಪನವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹೀಗಾಗಿ ಈ ಬಾರಿ ಕಾಂಗ್ರೆಸ್ ಸಂಸದರನ್ನು ಸೋಲಸಬೇಕೆಂಬ ಪಣ ತೊಟ್ಟಿದ್ದೇವೆ. ಈಗಾಗಲೇ ಇದಕ್ಕೆ ಸಿದ್ಧತೆ ನಡೆಸಿಕೊಂಡಿದ್ದೇವೆ ಎಂದು ಬಿಜೆಪಿ ಸೇರಿದ ಕಾಂಗ್ರೆಸ್ ಅತೃಪ್ತ ಮುಖಂಡರು ಹೇಳಿದ್ದಾರೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago