ಬೆಂಗಳೂರು:“ಒಂದು ವೇಳೆ ಯಡಿಯೂರಪ್ಪ ಅವರ ಜತೆ ಪ್ರಮಾಣ ವಚನ ಸ್ವೀಕರಿಸಲು ಅತೃಪ್ತ ಶಾಸಕರಿಗೆ ಸಾಧ್ಯವಾಗದಿದ್ದರೆ ಯಡಿಯೂರಪ್ಪನನ್ನು ಬಿಡುತ್ತಾರಾ? ಅವರನ್ನು ಕಿತ್ತು ತಿನ್ನುತ್ತಾರೆ ಅಷ್ಟೆ,” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು.
ಅತೃಪ್ತ ಶಾಸಕರ ರಾಜೀನಾಮೆ ವಿಷಯ ಇತ್ಯರ್ಥವಾದ ಬಳಿಕ ಸರ್ಕಾರ ರಚನೆ ಮಾತು. ಅವರ ಬಗ್ಗೆ ನನಗೆ ಎಲ್ಲವೂ ಗೊತ್ತು. ಯಡಿಯೂರಪ್ಪ ಪ್ರಮಾಣವಚನದ ದಿನವೇ ಇವರಿಗೂ ಪ್ರಮಾಣವಚನ ಆಗಬೇಕು. ಇಲ್ಲದಿದ್ದರೆ ಯಡಿಯೂರಪ್ಪ ಸ್ಥಿತಿ ಗೋವಿಂದ. ಕ್ಷೇತ್ರದ ಜನರು ನಂಬಿಕೆ ದ್ರೋಹ ಮಾಡಿ, 30-40 ವರ್ಷ ಸಾಕಿ ಸಲುಹಿದ ಪಕ್ಷವನ್ನೇ ಬಿಡದವರು, ಈಗ ಯಡಿಯೂರಪ್ಪ ಅವರನ್ನು ಬಿಡುತ್ತಾರಾ, ಎಂದು ಡಿಕೆಶಿ ಪ್ರಶ್ನಿಸಿದರು.
“ಇಷ್ಟು ವರ್ಷ ಎಲ್ಲವನ್ನೂ ನೀಡಿದ ಪಕ್ಷವನ್ನು ಬಿಡದವರು, ಯಡಿಯೂರಪ್ಪ ಅವರನ್ನು ಬಿಡುತ್ತಾರಾ? ಅವರ ಪ್ಯಾಂಟು – ಶರ್ಟ್ ಎಲ್ಲವನ್ನೂ ಕಿತ್ತು ಹಾಕಿ ನುಂಗುತ್ತಾರೆ. ಈಗಾಗಲೇ ಬೆಂಗಳೂರು ನನಗೆ ಬೇಕು, ಇಂಧನ, ಅದು ಇದು ಎಂದು ಸಾಲು ಸಾಲು ಬೇಡಿಕೆಯನ್ನು ಅತೃಪ್ತ ಶಾಸರಕರು ಇಟ್ಟಿದ್ದಾರೆ. ಯಡಿಯೂರಪ್ಪ ಅವರ ಬಳಿ ಇರುವ ಎಲ್ಲಾ ಮುತ್ತು ರತ್ನಗಳನ್ನು ಅವರು ಕೀಳುವುದು ಗ್ಯಾರಂಟಿ,” ಎಂದು ಲೇವಡಿ ಮಾಡಿದರು.
ನನಗೆ ಯಾವುದೇ ಸ್ಥಾನಮಾನ ಬೇಡ. ಆದರೆ ನನ್ನ ಸ್ನೇಹಿತರು ಹೇಗೆ ಎಂಬುವುದು ನನಗೆ ಗೊತ್ತು. ಒಬ್ಬರಿಗೆ ಬೆಂಗಳೂರು ಸಿಟಿ ಬೇಕು, ಒಬ್ಬರಿಗೆ ಪಿಡಬ್ಲೂಡಿ ಮತ್ತೊಬ್ಬರಿಗೆ ಪವರ್ ಬೇಕು. ಅಮಿತ್ ಶಾ ಹೇಗೆ ಕಂಟ್ರೋಲ್ ಮಾಡುತ್ತಾರೆ ನನಗೆ ಗೊತ್ತಿಲ್ಲ. ಆದರೆ ನಮ್ಮವರ ಬುದ್ಧಿ ನಂಗೆ ಗೊತ್ತಿದೆ. ಎಂದರು ವ್ಯಂಗ್ಯವಾಡಿದರು.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…