ಬೆಂಗಳೂರು:“ಒಂದು ವೇಳೆ ಯಡಿಯೂರಪ್ಪ ಅವರ ಜತೆ ಪ್ರಮಾಣ ವಚನ ಸ್ವೀಕರಿಸಲು ಅತೃಪ್ತ ಶಾಸಕರಿಗೆ ಸಾಧ್ಯವಾಗದಿದ್ದರೆ ಯಡಿಯೂರಪ್ಪನನ್ನು ಬಿಡುತ್ತಾರಾ? ಅವರನ್ನು ಕಿತ್ತು ತಿನ್ನುತ್ತಾರೆ ಅಷ್ಟೆ,” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು.
ಅತೃಪ್ತ ಶಾಸಕರ ರಾಜೀನಾಮೆ ವಿಷಯ ಇತ್ಯರ್ಥವಾದ ಬಳಿಕ ಸರ್ಕಾರ ರಚನೆ ಮಾತು. ಅವರ ಬಗ್ಗೆ ನನಗೆ ಎಲ್ಲವೂ ಗೊತ್ತು. ಯಡಿಯೂರಪ್ಪ ಪ್ರಮಾಣವಚನದ ದಿನವೇ ಇವರಿಗೂ ಪ್ರಮಾಣವಚನ ಆಗಬೇಕು. ಇಲ್ಲದಿದ್ದರೆ ಯಡಿಯೂರಪ್ಪ ಸ್ಥಿತಿ ಗೋವಿಂದ. ಕ್ಷೇತ್ರದ ಜನರು ನಂಬಿಕೆ ದ್ರೋಹ ಮಾಡಿ, 30-40 ವರ್ಷ ಸಾಕಿ ಸಲುಹಿದ ಪಕ್ಷವನ್ನೇ ಬಿಡದವರು, ಈಗ ಯಡಿಯೂರಪ್ಪ ಅವರನ್ನು ಬಿಡುತ್ತಾರಾ, ಎಂದು ಡಿಕೆಶಿ ಪ್ರಶ್ನಿಸಿದರು.
“ಇಷ್ಟು ವರ್ಷ ಎಲ್ಲವನ್ನೂ ನೀಡಿದ ಪಕ್ಷವನ್ನು ಬಿಡದವರು, ಯಡಿಯೂರಪ್ಪ ಅವರನ್ನು ಬಿಡುತ್ತಾರಾ? ಅವರ ಪ್ಯಾಂಟು – ಶರ್ಟ್ ಎಲ್ಲವನ್ನೂ ಕಿತ್ತು ಹಾಕಿ ನುಂಗುತ್ತಾರೆ. ಈಗಾಗಲೇ ಬೆಂಗಳೂರು ನನಗೆ ಬೇಕು, ಇಂಧನ, ಅದು ಇದು ಎಂದು ಸಾಲು ಸಾಲು ಬೇಡಿಕೆಯನ್ನು ಅತೃಪ್ತ ಶಾಸರಕರು ಇಟ್ಟಿದ್ದಾರೆ. ಯಡಿಯೂರಪ್ಪ ಅವರ ಬಳಿ ಇರುವ ಎಲ್ಲಾ ಮುತ್ತು ರತ್ನಗಳನ್ನು ಅವರು ಕೀಳುವುದು ಗ್ಯಾರಂಟಿ,” ಎಂದು ಲೇವಡಿ ಮಾಡಿದರು.
ನನಗೆ ಯಾವುದೇ ಸ್ಥಾನಮಾನ ಬೇಡ. ಆದರೆ ನನ್ನ ಸ್ನೇಹಿತರು ಹೇಗೆ ಎಂಬುವುದು ನನಗೆ ಗೊತ್ತು. ಒಬ್ಬರಿಗೆ ಬೆಂಗಳೂರು ಸಿಟಿ ಬೇಕು, ಒಬ್ಬರಿಗೆ ಪಿಡಬ್ಲೂಡಿ ಮತ್ತೊಬ್ಬರಿಗೆ ಪವರ್ ಬೇಕು. ಅಮಿತ್ ಶಾ ಹೇಗೆ ಕಂಟ್ರೋಲ್ ಮಾಡುತ್ತಾರೆ ನನಗೆ ಗೊತ್ತಿಲ್ಲ. ಆದರೆ ನಮ್ಮವರ ಬುದ್ಧಿ ನಂಗೆ ಗೊತ್ತಿದೆ. ಎಂದರು ವ್ಯಂಗ್ಯವಾಡಿದರು.
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…