Featured

ಅತೃಪ್ತ ಶಾಸಕರು ಕಾಂಗ್ರೆಸ್ ಗೆ ಕೈ ಕೊಟ್ಟವರು, ಇನ್ನು ಯಡಿಯೂರಪ್ಪರನ್ನು ಸುಮ್ಮನೇ ಬಿಡುತ್ತಾರಾ ?? : ಡಿಕೆ ಶಿವಕುಮಾರ್ -Vishwanews24

ಬೆಂಗಳೂರು:“ಒಂದು ವೇಳೆ ಯಡಿಯೂರಪ್ಪ ಅವರ ಜತೆ ಪ್ರಮಾಣ ವಚನ ಸ್ವೀಕರಿಸಲು ಅತೃಪ್ತ ಶಾಸಕರಿಗೆ ಸಾಧ್ಯವಾಗದಿದ್ದರೆ ಯಡಿಯೂರಪ್ಪನನ್ನು ಬಿಡುತ್ತಾರಾ? ಅವರನ್ನು ಕಿತ್ತು ತಿನ್ನುತ್ತಾರೆ ಅಷ್ಟೆ,” ಎಂದು ಡಿಕೆ ಶಿವಕುಮಾರ್​ ಪ್ರಶ್ನಿಸಿದರು.

ಅತೃಪ್ತ ಶಾಸಕರ ರಾಜೀನಾಮೆ ವಿಷಯ ಇತ್ಯರ್ಥವಾದ ಬಳಿಕ ಸರ್ಕಾರ ರಚನೆ ಮಾತು. ಅವರ ಬಗ್ಗೆ ನನಗೆ ಎಲ್ಲವೂ ಗೊತ್ತು. ಯಡಿಯೂರಪ್ಪ ಪ್ರಮಾಣವಚನದ ದಿನವೇ ಇವರಿಗೂ ಪ್ರಮಾಣವಚನ ಆಗಬೇಕು. ಇಲ್ಲದಿದ್ದರೆ ಯಡಿಯೂರಪ್ಪ ಸ್ಥಿತಿ ಗೋವಿಂದ. ಕ್ಷೇತ್ರದ ಜನರು ನಂಬಿಕೆ ದ್ರೋಹ ಮಾಡಿ, 30-40 ವರ್ಷ ಸಾಕಿ ಸಲುಹಿದ ಪಕ್ಷವನ್ನೇ ಬಿಡದವರು, ಈಗ ಯಡಿಯೂರಪ್ಪ ಅವರನ್ನು ಬಿಡುತ್ತಾರಾ, ಎಂದು ಡಿಕೆಶಿ ಪ್ರಶ್ನಿಸಿದರು.

“ಇಷ್ಟು ವರ್ಷ ಎಲ್ಲವನ್ನೂ ನೀಡಿದ ಪಕ್ಷವನ್ನು ಬಿಡದವರು, ಯಡಿಯೂರಪ್ಪ ಅವರನ್ನು ಬಿಡುತ್ತಾರಾ? ಅವರ ಪ್ಯಾಂಟು – ಶರ್ಟ್​ ಎಲ್ಲವನ್ನೂ ಕಿತ್ತು ಹಾಕಿ ನುಂಗುತ್ತಾರೆ. ಈಗಾಗಲೇ ಬೆಂಗಳೂರು ನನಗೆ ಬೇಕು, ಇಂಧನ, ಅದು ಇದು ಎಂದು ಸಾಲು ಸಾಲು ಬೇಡಿಕೆಯನ್ನು ಅತೃಪ್ತ ಶಾಸರಕರು ಇಟ್ಟಿದ್ದಾರೆ. ಯಡಿಯೂರಪ್ಪ ಅವರ ಬಳಿ ಇರುವ ಎಲ್ಲಾ ಮುತ್ತು ರತ್ನಗಳನ್ನು ಅವರು ಕೀಳುವುದು ಗ್ಯಾರಂಟಿ,” ಎಂದು ಲೇವಡಿ ಮಾಡಿದರು.

ನನಗೆ ಯಾವುದೇ ಸ್ಥಾನಮಾನ ಬೇಡ. ಆದರೆ ನನ್ನ ಸ್ನೇಹಿತರು ಹೇಗೆ ಎಂಬುವುದು ನನಗೆ ಗೊತ್ತು. ಒಬ್ಬರಿಗೆ ಬೆಂಗಳೂರು ಸಿಟಿ ಬೇಕು, ಒಬ್ಬರಿಗೆ ಪಿಡಬ್ಲೂಡಿ ಮತ್ತೊಬ್ಬರಿಗೆ ಪವರ್ ಬೇಕು. ಅಮಿತ್ ಶಾ ಹೇಗೆ ಕಂಟ್ರೋಲ್ ಮಾಡುತ್ತಾರೆ ನನಗೆ ಗೊತ್ತಿಲ್ಲ. ಆದರೆ ನಮ್ಮವರ ಬುದ್ಧಿ ನಂಗೆ ಗೊತ್ತಿದೆ. ಎಂದರು ವ್ಯಂಗ್ಯವಾಡಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago