Featured

ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ಪ್ರಕಟ  – VIshwanews24

ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು: ಅನುಭವ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ಪ್ರಕಟವಾಗಿದೆ. ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಹೈಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ.

ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿದ ಶಿಕ್ಷೆ ಪ್ರಕಟಿಸಿದೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.

ಕಾಶೀನಾಥ್ ಅವರ ಅನುಭವ ಸಿನಿಮಾ ತಂದು ಕೊಟ್ಟ ಯಶಸ್ಸಿನ ಬಳಿಕ ಸ್ಟಾರ್​ ನಟಿ ಎನಿಸಿಕೊಂಡಿದ್ದ ಅಭಿನಯಾ ಇದೀಗ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ. ತಮ್ಮ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ ಇಟ್ಟು ಪಾಲಕರ ಜೊತೆ ಸೇರಿ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟಿಸಿದೆ. ನ್ಯಾಯಮೂರ್ತಿ ಎಚ್​.ಬಿ. ಪ್ರಭಾಕರ್ ಶಾಸ್ತ್ರಿ ಅವರನ್ನೊಳಗೊಂಡ ಏಕಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದೆ. ಸರ್ಕಾರದ ಪರ ವಕೀಲ ಎಚ್.ವಿ. ವಿನಾಯಕ್ ಅವರು ವಾದ ಮಂಡಿಸಿದ್ದರು.

2002ರಲ್ಲಿ ಲಕ್ಷ್ಮೀದೇವಿ ಎಂಬುವವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು. ಮದುವೆ ವೇಳೆ ವರಕ್ಷಿಣೆ ಪಡೆದಿದ್ದಲ್ಲದೆ, ನಂತರವೂ ಪದೇಪದೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು. ವಿವಾಹದ ಸಮಯದಲ್ಲಿ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ಇದಾದ ನಂತರವೂ 1 ಲಕ್ಷ ರೂ.ಗೆ ಬೇಡಿಕೆ ಇಟ್ಟು 20 ಸಾವಿರ ಪಡೆದ ನಂತರವೂ ಕಿರುಕುಳ ಕೊಡುತ್ತಿದ್ದರು. ಹಣ ಕೊಟ್ಟರೂ ಸಹ ನನ್ನನ್ನು ಪಾಲಕರ ಮನೆಯಲ್ಲಿ ಬಿಟ್ಟಿದ್ದರು ಎಂದು ದೂರಿನಲ್ಲಿ ಲಕ್ಷ್ಮೀದೇವಿ ಆರೋಪಗಳ ಸುರಿಮಳೆಗೈದಿದ್ದರು.

ಹೆರಿಗೆಗೆ ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನ ಮನೆಗೆ ಕರೆತರದ ಅಭಿನಯಾ ಫ್ಯಾಮಿಲಿ, ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಆಕೆಯ ಪಾಲಕರಿಗೆ ಅವಮಾನ ಮಾಡಿರುವ ಆರೋಪವು ಇದೆ. ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾಲೇಔಟ್ ಠಾಣೆಗೆ ಲಕ್ಷ್ಮೀದೇವಿ ದೂರು ದಾಖಲಿಸಿದ್ದರು. ಬಳಿಕ ವಿಚಾರಣೆ ನಡೆಸಿ, ಚಂದ್ರಾಲೇಔಟ್ ಪೊಲೀಸರು ಸಲ್ಲಿಸಿದ್ದ ಚಾರ್ಜ್​ಶೀಟ್​ ಆಧರಿಸಿ, ಮ್ಯಾಜಿಸ್ಟ್ರೇಟ್ ಕೋರ್ಟ್ ಎಲ್ಲಾ ಐವರು ಆರೋಪಿಗಳಿಗೂ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗೂ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

ಎ1- ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉಳಿದ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ನಟಿ ಅಭಿನಯ ಅವರ ತಾಯಿ ಎ-3 ಜಯಮ್ಮಗೆ 5 ವರ್ಷ ಕಾರಾಗೃಹ ಶಿಕ್ಷೆ, ಎ-4 ಚೆಲುವರಾಜ್, ಎ-5 ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago