ಲಕ್ನೋ, : ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ, ಅತ್ಯಾಚಾರಗೈದು ಕೊಲೆಗೈದ ದುಷ್ಕರ್ಮಿಯನ್ನು ಎನ್ ಕೌಂಟರ್ ನಲ್ಲಿ ಸೆರೆಹಿಡಿದ ಪೊಲೀಸ್ ಅಧಿಕಾರಿ ಅಜಯ್ ಶರ್ಮಾರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ದುಷ್ಕೃತ್ಯ ಎಸಗಿ ಆರೋಪಿ ನಾಝಿಲ್ ತಲೆಮರೆಸಿಕೊಂಡಿದ್ದ. ಆತನಿಗಾಗಿ ಹುಡುಕಾಟ ನಡೆಸಿದಾಗ ಆತ ಪ್ರತಿದಾಳಿ ನಡೆಸಿದ್ದ. ರಾಮ್ ಪುರ ಜಿಲ್ಲೆಯಲ್ಲಿ ಮೇ 7ರಂದು ಬಾಲಕಿಯನ್ನು ಅತ್ಯಾಚಾರಗೈದಿದ್ದ ಈತ ಆಕೆಯನ್ನು ಕೊಲೆಗೈದಿದ್ದ.
ಅಜಯ್ ಶರ್ಮಾ ‘ಎನ್ ಕೌಂಟರ್ ಸ್ಪೆಷಲಿಸ್ಟ್’ ಎಂದೇ ಹೆಸರುವಾಸಿಯಾಗಿದ್ದು, ದುಷ್ಕರ್ಮಿ ನಾಝಿಲ್ ಕಾಲಿಗೆ ಮೂರು ಸುತ್ತು ಗುಂಡು ಹಾರಿಸಿದ್ದರು. ಗಾಯಗೊಂಡಿರುವ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಜಯ್ ಶರ್ಮಾ ಅವರು ಉತ್ತರ ಪ್ರದೇಶದ ಸಿಂಗಂ ಎಂದೇ ಹೆಸರುವಾಸಿಯಾಗಿದ್ದಾರೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಜಯ್ ಶರ್ಮಾ, ‘ಅತ್ಯಾಚಾರಿ ಮತ್ತು ಕೊಲೆ ಆರೋಪಿಯ ವಿರುದ್ಧದ ನಮ್ಮ ಕಾರ್ಯಾಚರಣೆಗೆ ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದಗಳು. ಇಂದು ದೇಶದೆಲ್ಲೆಡೆಯಿಂದ 1000ಕ್ಕೂ ಅಧಿಕ ಕರೆಗಳು ಬಂದಿದ್ದು, ನನ್ನನ್ನು ಸಹೋದರ, ಮಗ ಎಂದು ಕರೆದಿದ್ದಾರೆ’ ಎಂದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…