ಲಕ್ನೋ, : ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ, ಅತ್ಯಾಚಾರಗೈದು ಕೊಲೆಗೈದ ದುಷ್ಕರ್ಮಿಯನ್ನು ಎನ್ ಕೌಂಟರ್ ನಲ್ಲಿ ಸೆರೆಹಿಡಿದ ಪೊಲೀಸ್ ಅಧಿಕಾರಿ ಅಜಯ್ ಶರ್ಮಾರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ದುಷ್ಕೃತ್ಯ ಎಸಗಿ ಆರೋಪಿ ನಾಝಿಲ್ ತಲೆಮರೆಸಿಕೊಂಡಿದ್ದ. ಆತನಿಗಾಗಿ ಹುಡುಕಾಟ ನಡೆಸಿದಾಗ ಆತ ಪ್ರತಿದಾಳಿ ನಡೆಸಿದ್ದ. ರಾಮ್ ಪುರ ಜಿಲ್ಲೆಯಲ್ಲಿ ಮೇ 7ರಂದು ಬಾಲಕಿಯನ್ನು ಅತ್ಯಾಚಾರಗೈದಿದ್ದ ಈತ ಆಕೆಯನ್ನು ಕೊಲೆಗೈದಿದ್ದ.
ಅಜಯ್ ಶರ್ಮಾ ‘ಎನ್ ಕೌಂಟರ್ ಸ್ಪೆಷಲಿಸ್ಟ್’ ಎಂದೇ ಹೆಸರುವಾಸಿಯಾಗಿದ್ದು, ದುಷ್ಕರ್ಮಿ ನಾಝಿಲ್ ಕಾಲಿಗೆ ಮೂರು ಸುತ್ತು ಗುಂಡು ಹಾರಿಸಿದ್ದರು. ಗಾಯಗೊಂಡಿರುವ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಜಯ್ ಶರ್ಮಾ ಅವರು ಉತ್ತರ ಪ್ರದೇಶದ ಸಿಂಗಂ ಎಂದೇ ಹೆಸರುವಾಸಿಯಾಗಿದ್ದಾರೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಜಯ್ ಶರ್ಮಾ, ‘ಅತ್ಯಾಚಾರಿ ಮತ್ತು ಕೊಲೆ ಆರೋಪಿಯ ವಿರುದ್ಧದ ನಮ್ಮ ಕಾರ್ಯಾಚರಣೆಗೆ ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದಗಳು. ಇಂದು ದೇಶದೆಲ್ಲೆಡೆಯಿಂದ 1000ಕ್ಕೂ ಅಧಿಕ ಕರೆಗಳು ಬಂದಿದ್ದು, ನನ್ನನ್ನು ಸಹೋದರ, ಮಗ ಎಂದು ಕರೆದಿದ್ದಾರೆ’ ಎಂದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…