ಶಿವಮೊಗ್ಗ : “ಅತ್ಯಾಚಾರಿಗಳಿಗೆ, ದುಷ್ಕೃತ್ಯ ಮಾಡುವವರಿಗೆ ಸರ್ಕಾರ ಹಾಗೂ ಪೊಲೀಸ್ ಭಯವಿಲ್ಲ. ಭಯ ಹುಟ್ಟುವ ಕಾನೂನು ತರುವ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ, ಜಾರಿಗೆ ತರುತ್ತೇವೆ” ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರು ವರ್ಷದ ಕಂದಮ್ಮನ ಮೇಲೂ ಈ ಹಿಂದೆ ಅತ್ಯಾಚಾರ ಮಾಡಿದ್ದ ಘಟನೆ ನಡೆದಿದ್ದು, ನಾನು ವಿಧಾನ ಪರಿಷತ್ ಸದಸ್ಯನಾಗಿದ್ದ ಅವಧಿಯಲ್ಲಿ ಕಾನೂನು ತಿದ್ದುಪಡಿಯ ಬಗ್ಗೆ ಚರ್ಚೆಯಾಗಿತ್ತು. ಅಂದಿನ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಜಾರ್ಜ್ ಅವರು ಕಾನೂನು ತಿದ್ದುಪಡಿ ಮಾಡುತ್ತೇನೆ ಎಂದಿದ್ದರು. ಆದರೆ ತಿದ್ದುಪಡಿ ಆಗಲಿಲ್ಲ. ಇವತ್ತಿನವರೆಗೂ ಅದೇ ಕಾನೂನು ಮುಂದುವರೆದಿದೆ” ಎಂದರು.
ಇನ್ನು ಅತ್ಯಾಚಾರ ಮಾಡುವ ನೀಚರಿಗೆ ಶಿಕ್ಷೆ ನೀಡಲು ಕಾನೂನು ತಿದ್ದುಪಡಿಯಾಗಬೇಕು. ಕಾನೂನು ತಿದ್ದುಪಡಿ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನೇಂದ್ರ ಅವರ ಕೆಲವು ಮಾತುಗಳು ಯಾರಿಗೂ ನೋವುಂಟು ಮಾಡಲು ಹೇಳಿದ್ದಲ್ಲ. ಮನಸ್ಸಿನ ಭಾವನೆಯಲ್ಲಿ ಯಾರಿಗೂ ಅಪಮಾನ ಮಾಡುವ ಉದ್ದೇಶ ಹೊಂದಿರಲಿಲ್ಲ. ಅದರ ಬಗ್ಗೆ ಯಾವ ದೃಷ್ಟಿಯಲ್ಲಿ ಯೋಚನೆ ಮಾಡುತ್ತೇವೆಯೋ ಹಾಗೇ ಆಗುತ್ತದೆ ಎಂದು ಹೇಳಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…