ಶಿವಮೊಗ್ಗ : “ಅತ್ಯಾಚಾರಿಗಳಿಗೆ, ದುಷ್ಕೃತ್ಯ ಮಾಡುವವರಿಗೆ ಸರ್ಕಾರ ಹಾಗೂ ಪೊಲೀಸ್ ಭಯವಿಲ್ಲ. ಭಯ ಹುಟ್ಟುವ ಕಾನೂನು ತರುವ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ, ಜಾರಿಗೆ ತರುತ್ತೇವೆ” ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರು ವರ್ಷದ ಕಂದಮ್ಮನ ಮೇಲೂ ಈ ಹಿಂದೆ ಅತ್ಯಾಚಾರ ಮಾಡಿದ್ದ ಘಟನೆ ನಡೆದಿದ್ದು, ನಾನು ವಿಧಾನ ಪರಿಷತ್ ಸದಸ್ಯನಾಗಿದ್ದ ಅವಧಿಯಲ್ಲಿ ಕಾನೂನು ತಿದ್ದುಪಡಿಯ ಬಗ್ಗೆ ಚರ್ಚೆಯಾಗಿತ್ತು. ಅಂದಿನ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಜಾರ್ಜ್ ಅವರು ಕಾನೂನು ತಿದ್ದುಪಡಿ ಮಾಡುತ್ತೇನೆ ಎಂದಿದ್ದರು. ಆದರೆ ತಿದ್ದುಪಡಿ ಆಗಲಿಲ್ಲ. ಇವತ್ತಿನವರೆಗೂ ಅದೇ ಕಾನೂನು ಮುಂದುವರೆದಿದೆ” ಎಂದರು.
ಇನ್ನು ಅತ್ಯಾಚಾರ ಮಾಡುವ ನೀಚರಿಗೆ ಶಿಕ್ಷೆ ನೀಡಲು ಕಾನೂನು ತಿದ್ದುಪಡಿಯಾಗಬೇಕು. ಕಾನೂನು ತಿದ್ದುಪಡಿ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನೇಂದ್ರ ಅವರ ಕೆಲವು ಮಾತುಗಳು ಯಾರಿಗೂ ನೋವುಂಟು ಮಾಡಲು ಹೇಳಿದ್ದಲ್ಲ. ಮನಸ್ಸಿನ ಭಾವನೆಯಲ್ಲಿ ಯಾರಿಗೂ ಅಪಮಾನ ಮಾಡುವ ಉದ್ದೇಶ ಹೊಂದಿರಲಿಲ್ಲ. ಅದರ ಬಗ್ಗೆ ಯಾವ ದೃಷ್ಟಿಯಲ್ಲಿ ಯೋಚನೆ ಮಾಡುತ್ತೇವೆಯೋ ಹಾಗೇ ಆಗುತ್ತದೆ ಎಂದು ಹೇಳಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…